AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ

ಚೆಕ್‌ಬೌನ್ಸ್‌ ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವತಿ
ಹಲ್ಲೆಗೊಳಗಾದ ವಕೀಲ ಕೃಷ್ಣರೆಡ್ಡಿ ಚಿಕಿತ್ಸೆ ಪಡೆಯುತ್ತಿರುವುದು (ಎಡಚಿತ್ರ) ಮತ್ತು ವಕೀಲ ಕೃಷ್ಣರೆಡ್ಡಿ (ಬಲಚಿತ್ರ)
Rakesh Nayak Manchi
|

Updated on:Apr 21, 2023 | 6:03 PM

Share

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣವನ್ನು (Cheque bounce case) ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ (Assault) ನಡೆಸಿ ಪರಾರಿಯಾದ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಕಾರ್ಪೊರೇಷನ್‌ ಸರ್ಕಲ್‌ ಬಳಿಯಿರುವ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (Bengaluru Magistrate Court) ಹಾಜರಾದ ಕಾಂಚನ ಎಂಬ ಯುವತಿ ವಕೀಲ ಕೃಷ್ಣಾರೆಡ್ಡಿ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾಳೆ. ಘಟನೆ ನಂತರ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕೃಷ್ಣಾರೆಡ್ಡಿ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಎಂಬ ವ್ಯಕ್ತಿಯಿಂದ 5 ಲಕ್ಷ ಹಣ ಪಡೆದಿದ್ದ ಕಾಂಚನಾ ವಾಪಸ್ ನೀಡಿರಲಿಲ್ಲ. ಕಳೆದ 3 ವರ್ಷಗಳಿಂದ ಹಣ ವಾಪಸ್ ನೀಡುವುದಾಗಿ ಹೇಳುತ್ತಿದ್ದ ಕಾಂಚನಾ ಚೆಕ್ ಕೂಡ ನೀಡಿದ್ದಳು. ಆದರೆ ಈ ಚೆಕ್​ ಬೌನ್ಸ್ ಆಗಿರುವ ಹಿನ್ನೆಲೆ ದೂರು ಕೂಡ ದಾಖಲಾಗಿತ್ತು. ಈ ಸಂಬಂಧ ಇಂದು ಕೋರ್ಟ್​ಗೆ ಕಾಂಚನಾ ಹಾಜರಾಗಿದ್ದಾಳೆ. ಇತ್ತ ಹರೀಶ್ ಪರ ವಕೀಲರಾಗಿರುವ ಕೃಷ್ಣರೆಡ್ಡಿ ಪ್ರಕರಣವನ್ನು ಮುಂದುವರಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ಹಿನ್ನೆಲೆ ಕಾಂಚನಾ ಕೋಪಗೊಂಡು ಕೋರ್ಟ್​ ಒಳಗಿಂದ ಹೊರಬಂದಿದ್ದಾಳೆ. ಇತ್ತ ಕಲಾಪ ಮುಗಿಸಿದ ಬಳಿಕ ನ್ಯಾಯಾಲಯದ ಆವರಣಕ್ಕೆ ಬಂದ ಕೃಷ್ಣಾರೆಡ್ಡಿಯನ್ನು ತಡೆದ ಕಾಂಚನಾ, ಮತ್ತೆ ಕೇಸ್‌ ಮುಂದುವರಿಸುತ್ತಿಯಾ ಎಂದು ಹೇಳಿ ಚಾಕುವಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಘಟನೆಯಲ್ಲಿ ಕೃಷ್ಣರೆಡ್ಡಿ ಮುಖಕ್ಕೆ ಬಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಲ್ಲದೆ, ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Fri, 21 April 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!