AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕೋಪದಲ್ಲಿ ಗಂಡನ ಕಿವಿ ಕಚ್ಚಿ ತುಂಡರಿಸಿದ ಪತ್ನಿ, ದೂರು ದಾಖಲು

ಕೋಪದಲ್ಲಿ ಮಹಿಳೆಯೊಬ್ಬಳು ಗಂಡನ ಕಿವಿಯನ್ನು ಕಚ್ಚಿರುವ ಘಟನೆ ದೆಹಲಿಯ ಸುಲ್ತಾನ್​ಪುರಿ ಪ್ರದೇಶದಲ್ಲಿ ನಡೆದಿದೆ.ಮಹಿಳೆಯು ಬಲವಾಗಿ ಪತಿಯ ಕಿವಿಯನ್ನು ಕಚ್ಚಿರುವ ಕಾರಣ ಬಲಿ ಕಿವಿಯ ಮೇಲ್ಭಾಗ ತುಂಡಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ, ಚಿಕಿತ್ಸೆ ಬಳಿಕ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ.ದೂರಿನ ನಂತರ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 324 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಕೋಪದಲ್ಲಿ ಗಂಡನ ಕಿವಿ ಕಚ್ಚಿ ತುಂಡರಿಸಿದ ಪತ್ನಿ, ದೂರು ದಾಖಲು
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Nov 27, 2023 | 8:21 AM

Share

ಕೋಪದಲ್ಲಿ ಮಹಿಳೆಯೊಬ್ಬಳು ಗಂಡನ ಕಿವಿಯನ್ನು ಕಚ್ಚಿರುವ ಘಟನೆ ದೆಹಲಿಯ ಸುಲ್ತಾನ್​ಪುರಿ ಪ್ರದೇಶದಲ್ಲಿ ನಡೆದಿದೆ.ಮಹಿಳೆಯು ಬಲವಾಗಿ ಪತಿಯ ಕಿವಿಯನ್ನು ಕಚ್ಚಿರುವ ಕಾರಣ ಬಲಿ ಕಿವಿಯ ಮೇಲ್ಭಾಗ ತುಂಡಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ, ಚಿಕಿತ್ಸೆ ಬಳಿಕ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ.ದೂರಿನ ನಂತರ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 324 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ.20ರಂದು ಬೆಳಗ್ಗೆ 9.20ರ ಸುಮಾರಿಗೆ ಮನೆಯ ಹೊರಗೆ ಕಸ ಎಸೆಯಲು ಹೋಗಿದ್ದೆ, ಮನೆ ಸ್ವಚ್ಛಗೊಳಿಸುವಂತೆ ಪತ್ನಿಗೆ ಹೇಳಿದ್ದೆ, ಮನೆಗೆ ಬಂದ ಕೂಡಲೇ ಪತ್ನಿ ಜಗಳವಾಡಿದ್ದಾಳೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ. ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸಲು ಮನೆಯನ್ನು ಮಾರಿ ತನಗೆ ಪಾಲು ನೀಡುವಂತೆ ಪತ್ನಿ ಕೇಳಿಕೊಂಡಿದ್ದಾಳೆ ಎಂದು ಆಕೆಯ ಪತಿ ಪೊಲೀಸರಿಗೆ ತಿಳಿಸಿದ್ದಾರೆ.

ನಾನು ಅವಳಿಗೆ ಅರ್ಥ ಮಾಡಿಸಲು ಪ್ರಯತ್ನಿಸಿದೆ, ವಾಗ್ವಾದ ನಡೆಯಿತು, ಆಕೆ ಹೊಡೆಯಲು ಬಂದಳು ನಾನು ದೂರ ತಳ್ಳಿದೆ, ಆಗ ಹಿಂದಿನಿಂದ ಬಂದು ಕಿವಿಯನ್ನು ಕಚ್ಚಿದ್ದಾಳೆ. ಆಗ ನನ್ನ ಕಿವಿಯ ಮೇಲ್ಭಾಗ ತುಂಡಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮೈಸೂರು: ಮಗನ ಸಾವಿನ ಆಘಾತ ತಾಳಲಾರದೆ ಹೃದಯಾಘಾತದಿಂದ ತಾಯಿ ಸಾವು

ನವೆಂಬರ್ 22ರಂದು ಪೊಲೀಸರಿಗೆ ಬಂದು ಲಿಖಿತ ದೂರು ನೀಡಿದ್ದು, ನಾವು ದಾಖಲಿಸಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್