Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ, ನರ್ಸ್ ಅನುಮಾನಾಸ್ಪದ ಸಾವು

ಬೆಂಗಳೂರು: ನವೆಂಬರ್​ 30 ರಂದು ನೇಣು ಬಿಗಿದುಕೊಂಡಿದ್ದಳೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ  ಇಂದು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. 6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ(30) ವಿವಾಹವಾಗಿದ್ದರು. ಪೀಣ್ಯದ ಎಸ್​ಆರ್​ಎಸ್ ರಸ್ತೆಯ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಇಬ್ಬರೂ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಗಾಗ ದಂಪತಿ ನಡುವೆ ಜಗಳವಾಗ್ತಿತ್ತು. ನ. 30 ರಂದು ಪತ್ನಿ ನೇಣು ಬಿಗಿದುಕೊಂಡಿದ್ದಾಳೆಂದು ರವಿ ಆಸ್ಪತ್ರೆಗೆ ದಾಖಲಿಸಿದ್ದ. ಆದ್ರೆ ಇಂದು ಚಿಕಿತ್ಸೆ […]

ಕೌಟುಂಬಿಕ ಕಲಹ, ನರ್ಸ್ ಅನುಮಾನಾಸ್ಪದ ಸಾವು
Follow us
ಸಾಧು ಶ್ರೀನಾಥ್​
|

Updated on: Dec 03, 2019 | 12:47 PM

ಬೆಂಗಳೂರು: ನವೆಂಬರ್​ 30 ರಂದು ನೇಣು ಬಿಗಿದುಕೊಂಡಿದ್ದಳೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ  ಇಂದು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ಆಶಾರಾಣಿ(30) ವಿವಾಹವಾಗಿದ್ದರು. ಪೀಣ್ಯದ ಎಸ್​ಆರ್​ಎಸ್ ರಸ್ತೆಯ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಇಬ್ಬರೂ ನರ್ಸ್ ಆಗಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಗಾಗ ದಂಪತಿ ನಡುವೆ ಜಗಳವಾಗ್ತಿತ್ತು.

ನ. 30 ರಂದು ಪತ್ನಿ ನೇಣು ಬಿಗಿದುಕೊಂಡಿದ್ದಾಳೆಂದು ರವಿ ಆಸ್ಪತ್ರೆಗೆ ದಾಖಲಿಸಿದ್ದ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಶಾರಾಣಿ ಮೃತಪಟ್ಟಿದ್ದಾರೆ. ಈ ಸಂಬಂಧ ಆರ್​ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.