AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು, ತನಿಖೆಗೆ ಆದೇಶ ನೀಡಿದ ಆರೋಗ್ಯ ಸಚಿವೆ

ಜ್ವರ ಎಂದು ಬಂದ 45 ವರ್ಷದ ಮಹಿಳೆಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ತಪ್ಪಾದ ಚುಚ್ಚುಮದ್ದನ್ನು ಸಾವನ್ನಪ್ಪಿದ್ದಾರೆ.

ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು, ತನಿಖೆಗೆ ಆದೇಶ ನೀಡಿದ ಆರೋಗ್ಯ ಸಚಿವೆ
Woman dies due to wrong injection, Health Minister orders probe
TV9 Web
| Edited By: |

Updated on: Oct 28, 2022 | 10:32 AM

Share

ಕೇರಳ: ಜ್ವರ ಎಂದು ಬಂದ 45 ವರ್ಷದ ಮಹಿಳೆಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ತಪ್ಪಾದ ಚುಚ್ಚುಮದ್ದನ್ನು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೃತರನ್ನು ಕೋಯಿಕ್ಕೋಡ್‌ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದೆ. ನರ್ಸ್ ತಪ್ಪು ಇಂಜೆಕ್ಷನ್ ನೀಡುವುದರಿಂದ ಸಿಂಧು ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ಮೃತರ ಕುಟುಂಬ ಸದಸ್ಯರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಸಿಂಧು ಅವರಿಗೆ ಗುರುವಾರ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು (ಶುಕ್ರವಾರ) ಬೆಳಿಗ್ಗೆ ಆರೋಗ್ಯ ಸುಧಾರಿಸಿತ್ತು, ಆದರೆ ನರ್ಸ್ ತಪ್ಪಾಗಿ ಚುಚ್ಚುಮದ್ದನ್ನು ನೀಡಿದ ನಂತರ ಅವರು ಆರೋಗ್ಯ ಮತ್ತಷ್ಟು ಹದಗೆಡಲು ಪ್ರಾರಂಭವಾಗಿತ್ತು.

ಇದನ್ನು ಓದಿ: Crime News: ಗುರುಗ್ರಾಮದಲ್ಲಿ ಭೀಕರ ಅಪಘಾತ; ಬಸ್​ ಚಾಲಕ ಸಾವು, 15 ಜನರಿಗೆ ಗಾಯ

ಅವರ ಗಂಡ ರೇಘು ಅವರು ಹೇಳಿರುವಂತೆ ಇದು ನರ್ಸ್‌ನ ತಪ್ಪು ಚುಚ್ಚುಮದ್ದಿನ ನಂತರ ಅವಳು ಬಲಹೀನಳಾದಳು, ಅವಳು ನನ್ನ ಮಡಿಲಲ್ಲಿ ಮಲಗಿದ್ದಳು, ಆದರೆ ಕೆಲವು ಹೊತ್ತಿನ ನಂತರ ಕೊನೆಯುಸಿರೆಳೆದಿದ್ದಾಳೆ. ಚುಚ್ಚುಮದ್ದಿನ ನೀಡದ ನಂತರ ಮನೆ ಬಂದ ನಂತರ ಅವಳ ಈ ಪರಿಸ್ಥಿತಿಯನ್ನು ನೋಡಿ ನಾನು ನರ್ಸ್‌ಗೆ ಕರೆ ಮಾಡಿದಾಗ, ಯಾವುದೇ ತೊಂದರೆ ಆಗುವುದಿಲ್ಲ ಅವರ ಇದೊಂದು ಸಾಮಾನ್ಯ ಚುಚ್ಚುಮದ್ದು ಎಂದು ಹೇಳಿದ್ದಾರೆ.

ನಿನ್ನೆ ಬಳಸಿದ ಔಷಧವನ್ನು ನನ್ನ ಮಗಳಿಗೆ ಇಂದು ಬಳಸಿದರೆ ಎಂದು ಕುಟುಂಬದವರು ಹೇಳಿಕೊಂಡಿದ್ದರೂ, ಆದರೆ ಈ ಆರೋಪವನ್ನು ಆಸ್ಪತ್ರೆಯವರು ನಿರಾಕರಿಸಿದ್ದಾರೆ. ಆಕೆಯ ಹಠಾತ್ ಸಾವಿನ ಹಿಂದಿನ ಸ್ಪಷ್ಟವಾದ ಕಾರಣ ಇನ್ನೂ ತಿಳಿದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಘಟನೆಯ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ