AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳಿಗೆ ಜಾಮೀನು ನೀಡಲು ಸುಳ್ಳು ದಾಖಲೆ ಸೃಷ್ಟಿ: ವಂಚಕಿ ಮಹಿಳೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್​

ಕೊಲೆ, ಸುಲಿಗೆ ಮಾಡಿ ಜೈಲು ಸೇರಿದ್ದ ಅರೋಪಿಗಳಿಗೆ ಸುಳ್ಳು ದಾಖಲೆ ನೀಡಿ ಜಾಮೀನು ನೀಡಿದ್ದ ಮಹಿಳೆಗೆ, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ 50ಸಾವಿರ ನಗದು ದಂಡ ಹಾಗೂ ಅರೋಪಿಗಳನ್ನ ಒಂದು ತಿಂಗಳ ಒಳಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶ ಹೊರಡಿಸಿದೆ

ಆರೋಪಿಗಳಿಗೆ ಜಾಮೀನು ನೀಡಲು ಸುಳ್ಳು ದಾಖಲೆ ಸೃಷ್ಟಿ: ವಂಚಕಿ ಮಹಿಳೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್​
ವಂಚಕಿ ಮಹಿಳೆ ಸಾವಿತ್ರಮ್ಮ
ಪೃಥ್ವಿಶಂಕರ
| Edited By: |

Updated on:Mar 05, 2021 | 10:32 AM

Share

ನೆಲಮಂಗಲ: ಕೊಲೆ, ಸುಲಿಗೆ ಮಾಡಿ ಜೈಲು ಸೇರಿದ್ದ ಅರೋಪಿಗಳಿಗೆ ಸುಳ್ಳು ದಾಖಲೆ ನೀಡಿ ಜಾಮೀನು ನೀಡಿದ್ದ ಮಹಿಳೆಗೆ, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ 50 ಸಾವಿರ ನಗದು ದಂಡ ಹಾಗೂ ಅರೋಪಿಗಳನ್ನ ಒಂದು ತಿಂಗಳ ಒಳಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶ ಹೊರಡಿಸಿದೆ.

ರಾಮನಗರ ಮೂಲದ ಸಾವಿತ್ರಮ್ಮ(36), ಕೋರ್ಟ್ ದಂಡ ವಿಧಿಸಿದ ಮಹಿಳೆಯಾಗಿದ್ದು, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯದ ನ್ಯಾಯಾಧೀಶರಾಗಿರುವ ವೆಂಕಟೇಶ್ ನಾಯ್ಕ ಈ ಅದೇಶ ಹೊರಡಿಸಿದ್ದಾರೆ. 2015ರಲ್ಲಿ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹಣಕಾಸಿನ ವಿಚಾರವಾಗಿ ಉಮೇಶ್, ಮಂಜುನಾಥ್ ಎಂಬುವವರ ಕೊಲೆಯಾಗಿತ್ತು. ಮಾಚೋಹಳ್ಳಿಯಲ್ಲಿ ಚೇತನ್, ನಾಗರಾಜು ಎಂಬ ಇಬ್ಬರು ಅರೋಪಿಗಳು ಸೇರಿ ಕೊಲೆಗೈದಿದ್ದರು.

ಹೀಗಾಗಿ ಅರೋಪಿಗಳನ್ನ ಬಿಡಿಸಲು ಸಾವಿತ್ರಮ್ಮ ನಕಲಿಯಾಗಿ ಪಹಣಿ ಸೃಷ್ಟಿಸಿದ್ದರು. ಲಕ್ಷ್ಮೀ ಹೆಸರಿನ ಗುರುತಿನ ಚೀಟಿಗೆ ಪೋಟೋ ಅಂಟಿಸಿ ನ್ಯಾಯಾಲಯಕ್ಕೆ ಸುಳ್ಳು ದಾಖಲಾತಿ ನೀಡಿದ್ದರು. ಜೊತೆಗೆ ಬನ್ನೇರುಘಟ್ಟ, ಹಲಸೂರು ಗೇಟ್, ಪೀಣ್ಯಾ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಸೇರಿದಂತೆ 8ಕ್ಕೂ ಹೆಚ್ಚು ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ ಮಾಡಿದ್ದ ಅರೋಪಿಗಳಿಗೆ ಬೇರೆ ಬೇರೆ ಹೆಸರಿನಲ್ಲಿ ಜಾಮೀನು ನೀಡಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ವಂಚಕಿ ಸಾವಿತ್ರಮ್ಮಗೆ ನ್ಯಾಯಾಲಯ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಚಾಲಾಕಿ ವಂಚಕಿಯರಿಗೆ ಮಹಿಳೆಯರ ಗೂಸಾ..! ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ಕೈಕೊಟ್ಟವರಿಗೆ ಗೂಸಾ

Published On - 10:20 am, Fri, 5 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ