AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳಿಗೆ ಜಾಮೀನು ನೀಡಲು ಸುಳ್ಳು ದಾಖಲೆ ಸೃಷ್ಟಿ: ವಂಚಕಿ ಮಹಿಳೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್​

ಕೊಲೆ, ಸುಲಿಗೆ ಮಾಡಿ ಜೈಲು ಸೇರಿದ್ದ ಅರೋಪಿಗಳಿಗೆ ಸುಳ್ಳು ದಾಖಲೆ ನೀಡಿ ಜಾಮೀನು ನೀಡಿದ್ದ ಮಹಿಳೆಗೆ, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ 50ಸಾವಿರ ನಗದು ದಂಡ ಹಾಗೂ ಅರೋಪಿಗಳನ್ನ ಒಂದು ತಿಂಗಳ ಒಳಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶ ಹೊರಡಿಸಿದೆ

ಆರೋಪಿಗಳಿಗೆ ಜಾಮೀನು ನೀಡಲು ಸುಳ್ಳು ದಾಖಲೆ ಸೃಷ್ಟಿ: ವಂಚಕಿ ಮಹಿಳೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್​
ವಂಚಕಿ ಮಹಿಳೆ ಸಾವಿತ್ರಮ್ಮ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Mar 05, 2021 | 10:32 AM

ನೆಲಮಂಗಲ: ಕೊಲೆ, ಸುಲಿಗೆ ಮಾಡಿ ಜೈಲು ಸೇರಿದ್ದ ಅರೋಪಿಗಳಿಗೆ ಸುಳ್ಳು ದಾಖಲೆ ನೀಡಿ ಜಾಮೀನು ನೀಡಿದ್ದ ಮಹಿಳೆಗೆ, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ 50 ಸಾವಿರ ನಗದು ದಂಡ ಹಾಗೂ ಅರೋಪಿಗಳನ್ನ ಒಂದು ತಿಂಗಳ ಒಳಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶ ಹೊರಡಿಸಿದೆ.

ರಾಮನಗರ ಮೂಲದ ಸಾವಿತ್ರಮ್ಮ(36), ಕೋರ್ಟ್ ದಂಡ ವಿಧಿಸಿದ ಮಹಿಳೆಯಾಗಿದ್ದು, ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯದ ನ್ಯಾಯಾಧೀಶರಾಗಿರುವ ವೆಂಕಟೇಶ್ ನಾಯ್ಕ ಈ ಅದೇಶ ಹೊರಡಿಸಿದ್ದಾರೆ. 2015ರಲ್ಲಿ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹಣಕಾಸಿನ ವಿಚಾರವಾಗಿ ಉಮೇಶ್, ಮಂಜುನಾಥ್ ಎಂಬುವವರ ಕೊಲೆಯಾಗಿತ್ತು. ಮಾಚೋಹಳ್ಳಿಯಲ್ಲಿ ಚೇತನ್, ನಾಗರಾಜು ಎಂಬ ಇಬ್ಬರು ಅರೋಪಿಗಳು ಸೇರಿ ಕೊಲೆಗೈದಿದ್ದರು.

ಹೀಗಾಗಿ ಅರೋಪಿಗಳನ್ನ ಬಿಡಿಸಲು ಸಾವಿತ್ರಮ್ಮ ನಕಲಿಯಾಗಿ ಪಹಣಿ ಸೃಷ್ಟಿಸಿದ್ದರು. ಲಕ್ಷ್ಮೀ ಹೆಸರಿನ ಗುರುತಿನ ಚೀಟಿಗೆ ಪೋಟೋ ಅಂಟಿಸಿ ನ್ಯಾಯಾಲಯಕ್ಕೆ ಸುಳ್ಳು ದಾಖಲಾತಿ ನೀಡಿದ್ದರು. ಜೊತೆಗೆ ಬನ್ನೇರುಘಟ್ಟ, ಹಲಸೂರು ಗೇಟ್, ಪೀಣ್ಯಾ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಸೇರಿದಂತೆ 8ಕ್ಕೂ ಹೆಚ್ಚು ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ ಮಾಡಿದ್ದ ಅರೋಪಿಗಳಿಗೆ ಬೇರೆ ಬೇರೆ ಹೆಸರಿನಲ್ಲಿ ಜಾಮೀನು ನೀಡಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ವಂಚಕಿ ಸಾವಿತ್ರಮ್ಮಗೆ ನ್ಯಾಯಾಲಯ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಚಾಲಾಕಿ ವಂಚಕಿಯರಿಗೆ ಮಹಿಳೆಯರ ಗೂಸಾ..! ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ಕೈಕೊಟ್ಟವರಿಗೆ ಗೂಸಾ

Published On - 10:20 am, Fri, 5 March 21

ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ