AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಾಗಲ್ಲ ಎಂದು ಜ್ಯೋತಿಷಿ ಹೇಳಿದ್ದಕ್ಕೆ ಕಿರುಕುಳ? ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಬೆಂಗಳೂರು: ನಗರದ ಹೊರಮಾವು ಪ್ರದೇಶದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಾಗಲ್ಲವೆಂದು ಜ್ಯೋತಿಷಿ ಹೇಳಿದ್ದಕ್ಕೆ 25 ವರ್ಷದ ಅಶ್ವಿನಿ ಎಂಬುವವರಿಗೆ ಆಕೆಯ ಪತಿ ಹಾಗೂ ಮನೆಯವರು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇವರ ಕಿರುಕುಳದಿಂದ ಬೇಸತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಶ್ವಿನಿ ಕಳೆದ ಫೆಬ್ರವರಿಯಲ್ಲಿ ಯುವರಾಜ್ ಎಂಬುವವನ ಜೊತೆ ಮದುವೆಯಾಗಿದ್ದರು. ವಿವಾಹದ ಬಳಿಕ ಯುವರಾಜ್ ಪೋಷಕರು ಜ್ಯೋತಿಷಿ ಬಳಿ ಅಶ್ವಿನಿ ಜಾತಕ ತೋರಿಸಿದ್ದರಂತೆ. ಆಗ, ಅಶ್ವಿನಿಗೆ […]

ಮಕ್ಕಳಾಗಲ್ಲ ಎಂದು ಜ್ಯೋತಿಷಿ ಹೇಳಿದ್ದಕ್ಕೆ ಕಿರುಕುಳ? ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
KUSHAL V
| Edited By: |

Updated on:Nov 14, 2020 | 5:32 PM

Share

ಬೆಂಗಳೂರು: ನಗರದ ಹೊರಮಾವು ಪ್ರದೇಶದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳಾಗಲ್ಲವೆಂದು ಜ್ಯೋತಿಷಿ ಹೇಳಿದ್ದಕ್ಕೆ 25 ವರ್ಷದ ಅಶ್ವಿನಿ ಎಂಬುವವರಿಗೆ ಆಕೆಯ ಪತಿ ಹಾಗೂ ಮನೆಯವರು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇವರ ಕಿರುಕುಳದಿಂದ ಬೇಸತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಅಶ್ವಿನಿ ಕಳೆದ ಫೆಬ್ರವರಿಯಲ್ಲಿ ಯುವರಾಜ್ ಎಂಬುವವನ ಜೊತೆ ಮದುವೆಯಾಗಿದ್ದರು. ವಿವಾಹದ ಬಳಿಕ ಯುವರಾಜ್ ಪೋಷಕರು ಜ್ಯೋತಿಷಿ ಬಳಿ ಅಶ್ವಿನಿ ಜಾತಕ ತೋರಿಸಿದ್ದರಂತೆ. ಆಗ, ಅಶ್ವಿನಿಗೆ ಮಕ್ಕಳಾಗಲ್ಲ ಎಂದು ಜ್ಯೋತಿಷಿ ಹೇಳಿದ್ದನಂತೆ. ಈ ವಿಚಾರ ತಿಳಿದ ಯುವರಾಜ್​ ಹಾಗೂ ಆತನ ಕುಟುಂಬದವರು ಅಶ್ವಿನಿಗೆ ಪ್ರತಿದಿನ ಕಿರುಕುಳ ಕೊಡ್ತಿದ್ರಂತೆ.

ಜೊತೆಗೆ, ಅಶ್ವಿನಿಯಿಂದ ದೂರವಾಗಲು‌ ಆಕೆಯ ಪತಿ ಮನೆಯವರು ವರದಕ್ಷಿಣೆಗೆ ಕಿರುಕುಳ ಸಹ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಾರು, ಚಿನ್ನಾಭರಣ ಮತ್ತು ನಗದು ನೀಡುವಂತೆ ಅಶ್ವಿನಿಗೆ ಕಿರುಕುಳ ಕೊಡ್ತಿದ್ದರಂತೆ. ಈ ವಿಚಾರವಾಗಿ, ನಿನ್ನೆ ಕೂಡ ದಂಪತಿ ನಡುವೆ ಜಗಳ ನಡೆದಿತ್ತು ಎಂದು ಹೇಳಲಾಗಿದೆ.

ಇದೀಗ, ಇಂದು ಬೆಳಗ್ಗೆ ಅಶ್ವಿನಿ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 5:32 pm, Sat, 14 November 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ