AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಹಣ ಡಬಲ್ ಆಮಿಷವೊಡ್ಡಿ ಪ್ರತಿಷ್ಠಿತ ಮನೆತನ ‌ಮಹಿಳೆಗೆ ಲಕ್ಷ ಲಕ್ಷ ಹಣ ವಂಚನೆ

ಅರ್ನ್ ಮನಿ ಆ್ಯಪ್ ಕಳುಹಿಸಿ ಹಣ ದ್ವಿಗುಣವಾಗುತ್ತದೆ ಎಂದು ನಂಬಿಸಿ ಪ್ರತಿಷ್ಠಿತ ಮನೆತನದ ಮಹಿಳೆಯೊಬ್ಬರಿಗೆ ವಂಚಿಸಿದ ಘಟನೆ ಗದಗ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ

Cyber Crime: ಹಣ ಡಬಲ್ ಆಮಿಷವೊಡ್ಡಿ ಪ್ರತಿಷ್ಠಿತ ಮನೆತನ ‌ಮಹಿಳೆಗೆ ಲಕ್ಷ ಲಕ್ಷ ಹಣ ವಂಚನೆ
ಗದಗ ನಗರ ಪೊಲೀಸ್​ ಠಾಣೆ
TV9 Web
| Edited By: |

Updated on:Jan 11, 2023 | 8:35 AM

Share

ಗದಗ (Gadag) ಜಿಲ್ಲೆಯಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣ ನಡೆದಿದೆ. ಹೌದು ಬ್ಲಿಂಕಿಟ್ ಎಂಬ ಅರ್ನ್ ಮನಿ ಆ್ಯಪ್ ಕಳುಹಿಸಿ ಅದನ್ನು ಪ್ಲೇ ಮಾಡುತ್ತಾ ಹೋದರೆ ಹಣ ದ್ವಿಗುಣವಾಗುತ್ತದೆ ಎಂದು ಪ್ರತಿಷ್ಠಿತ ಮನೆತನದ ಮಹಿಳೆಯೊಬ್ಬರಿಗೆ ನಂಬಿಸಿ 10 ಲಕ್ಷ ರೂಪಾಯಿಗೂ ಹೆಚ್ಚು ಹಣ ವಂಚಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗದಗ ತಾಲೂಕಿನ ಹುಲಕೋಟಿ ಗ್ರಾಮದ ವಿದ್ಯಾ ಎಂಬ ಪ್ರತಿಷ್ಠಿತ ಮನೆತನದ ಮಹಿಳೆಗೆ ಅಕ್ಟೋಬರ್ 3ರಂದು +63991427160 ಮತ್ತು +639498074279 ಈ ನಂಬರಿನಿಂದ ಅರ್ನ್ ಮನಿ ಆ್ಯಪ್ ಕಳುಹಿಸಿ ಪ್ಲೇ ಮಾಡುತ್ತಾ ಹೋದರೆ ಹಣ ದ್ವಿಗುಣವಾಗುತ್ತದೆ ಅಂತ ಹೇಳಿ ಮೊದಲಿಗೆ ಎರಡು ಸಾವಿರ ಹಣ ಹಾಕಿ ಆಸೆ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ದಾರುಣ ಘಟನೆ: ಬೀದಿ ನಾಯಿಗಳ ದಾಳಿಗೆ ಅಮಾಯಕ ಭಿಕ್ಷುಕಿ ಸಾವು

ನಂತರ ಅಕೌಂಟ್ ಫ್ರೀಜ್ ಆಗಿದೆ ಅದು ಓಪನ್ ಆಗಲು ಯುಪಿಐಡಿ ನಂಬರ್​ಗಳನ್ನು ಕಳುಹಿಸಿ ಹಂತ-ಹಂತವಾಗಿ ಒಟ್ಟು 10,57,950ರೂ.ಗಳನ್ನು ಹಾಕಿಸಿಕೊಂಡಿದ್ದಾರೆ. ಮತ್ತೆ ರಾಕೇಶ್ ಸಿಂಗ್- 9647251753 ಹಾಗೂ ವಿಪಿನ್ ಗುಪ್ತಾಗೆ 9733184532 ನಂಬರನಿಂದ ಕರೆ ಮಾಡಿ ನಟರಾಜ್ ಪೆನ್ಸಿಲ್ ಕಂಪನಿಯಿಂದ ಮನೆಯಿಂದಲೇ ಹಣ ಗಳಿಸಬಹುದು ಅಂತ ಹೇಳಿ 2,35,000ಗಳನ್ನು ಹಾಕಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕೊಟಕ್ ಮಹೀಂದ್ರಾ ಬ್ಯಾಂಕ್​ನಲ್ಲಿ ಫೇಕ್ ಅಕೌಂಟ್ ತೆರೆದು ಬೇರೆದವರಿಗೆ ವಂಚನೆ ಮಾಡಿದ್ದಾರೆ. ಈ ಕುರಿತು ಗದಗ ಸಿಇಎನ್ ಠಾಣೆಯಲ್ಲಿ it act 2008 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಗಳು-ಅಳಿಯನನ್ನು ನೋಡಿಕೊಂಡು ಹೋಗಲು ಬಂದವ ಮನೆ ಮಾಲಕಿಯ ಐಶ್ವರ್ಯಕ್ಕೆ ಮರುಳಾದ; ಮುಂದೇನಾಯ್ತು ನೋಡಿ

ಗದಗ ಜಿಲ್ಲೆಯಲ್ಲಿ ಇತ್ತಿಚೀಗೆ ಈ ರೀತಿ ಮೋಸ ಹೋಗುವ ಪ್ರಕರಣ ಹೆಚ್ಚಾಗುತ್ತಿವೆ. ಜನರು ಆನ್ ಲೈನ್, ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಮೋಸದ ಜಾಲಕ್ಕೆ ಬಲೆ ಬಿಳಬಾರದು. ಜನರು ಎಚ್ಚರಿಕೆಯಿಂದ ಇರಬೇಕು ಅಂತ ಗದಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Published On - 10:53 pm, Tue, 10 January 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ