ರಾತ್ರಿ ಯಾವ್ದೋ ಆಟೋ ಸಿಕ್ತು ಎಂದು ಓಡಿ ಬಂದು ಹತ್ತಿದ ಮಹಿಳೆ, ಚಾಲಕ ಹಾಗೂ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ರಾತ್ರಿ ಹೊತ್ತು ನಿರ್ಜನ ಪ್ರದೇಶಗಳಲ್ಲಿ ಓಡಾಡುವ ಮಹಿಳೆಯರೇ ಎಚ್ಚರ, ಆಟೋಗೆ ಕಾಯಬೇಕಿದ್ದರೂ ಮನೆಗಳಿರುವ ಪ್ರದೇಶಗಳಲ್ಲಿಯೇ ನಿಲ್ಲಿ, ಆತುರಾತುರವಾಗಿ ಆಟೋವನ್ನು ಏರಬೇಡಿ. ರಾತ್ರಿಯಾಯ್ತು ಯಾವ್ದೋ ಒಂದು ಆಟೋ ಸಿಕ್ತಲ್ಲಾ ಎಂದು ಮಹಿಳೆಯೊಬ್ಬಳು ಆಟೋ ಏರಿ ಕುಳಿತಿದ್ದಾಳೆ, ಸ್ವಲ್ಪ ದೂರ ಹೋಗುವಷ್ಟರಲ್ಲೇ ಚಾಲಕನ ಸ್ನೇಹಿತರೆಂದು ಇಬ್ಬರು ಆಟೋ ಹತ್ತಿದ್ದರು.

ರಾತ್ರಿ ಯಾವ್ದೋ ಆಟೋ ಸಿಕ್ತು ಎಂದು ಓಡಿ ಬಂದು ಹತ್ತಿದ ಮಹಿಳೆ, ಚಾಲಕ ಹಾಗೂ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ
ಅತ್ಯಾಚಾರImage Credit source: India Today
Follow us
|

Updated on: Sep 05, 2023 | 12:32 PM

ರಾತ್ರಿ ಹೊತ್ತು ನಿರ್ಜನ ಪ್ರದೇಶಗಳಲ್ಲಿ ಓಡಾಡುವ ಮಹಿಳೆಯರೇ ಎಚ್ಚರ, ಆಟೋಗೆ ಕಾಯಬೇಕಿದ್ದರೂ ಮನೆಗಳಿರುವ ಪ್ರದೇಶಗಳಲ್ಲಿಯೇ ನಿಲ್ಲಿ, ಆತುರಾತುರವಾಗಿ ಆಟೋವನ್ನು ಏರಬೇಡಿ. ರಾತ್ರಿಯಾಯ್ತು ಯಾವ್ದೋ ಒಂದು ಆಟೋ ಸಿಕ್ತಲ್ಲಾ ಎಂದು ಮಹಿಳೆಯೊಬ್ಬಳು ಆಟೋ ಏರಿ ಕುಳಿತಿದ್ದಾಳೆ, ಸ್ವಲ್ಪ ದೂರ ಹೋಗುವಷ್ಟರಲ್ಲೇ ಚಾಲಕನ ಸ್ನೇಹಿತರೆಂದು ಇಬ್ಬರು ಆಟೋ ಹತ್ತಿದ್ದರು. ಬಳಿಕ ನಿರ್ಜನ ಪ್ರದೇಶಕ್ಕೆ ಕರೆತಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ, ಇನ್ನೇನು ಚಾಲಕನ ಸರದಿ ಬರಬೇಕು ಅನ್ನುವಷ್ಟರಲ್ಲಿ ಆಕೆ ಹೇಗೋ ತಪ್ಪಿಸಿಕೊಂಡು ರಸ್ತೆಗೆ ಬಂದಿದ್ದಾಳೆ. ಅಲ್ಲಿದ್ದವರು ಆಕೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ್ದಾರೆ. ಈ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ,   ಮಹಿಳೆ ಖಾಸಗಿ ಕಂಪನಿಯೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು, ರಾತ್ರಿ ಕೆಲಸ ಮುಗಿಸಿ 10 ಗಮಟೆ ಸುಮಾರಿಗೆ ಆಟೋಗಾಗಿ ಕಾಯುತ್ತಿದ್ದಳು. ಆಗ ಆಟೋವೊಂದು ಬಂದು ನಿಂತಿತ್ತು, ರಾತ್ರಿ ಹೊತ್ತಾದ ಕಾರಣ ತಕ್ಷಣವೇ ಆಟೋ ಹತ್ತಿದ್ದಳು.

ಸನೋಜ್ ಮತ್ತು ವಿಷ್ಣು ಅವರನ್ನು ಸೋಮವಾರ ಬಂಧಿಸಲಾಗಿದ್ದು, ಎಲ್ಲಾ ಆರೋಪಿಗಳ ವಿರುದ್ಧ ಫರಿದಾಬಾದ್ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ನಾವು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಆಟೋ ಚಾಲಕನನ್ನು ಹಿಡಿಯಲು ಬೇಕಾದ ಕ್ರಮಗಳನ್ನು ಕೈಗೊಂಡಿದ್ದೇವೆ ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ