AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು
ಸಾವುImage Credit source: Indian Express
ನಯನಾ ರಾಜೀವ್
|

Updated on: Jun 22, 2023 | 7:49 AM

Share

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ.ಯುವತಿಯನ್ನು ತಪ್ಪೊಪ್ಪಿಕೊಳ್ಳುವಂತೆ ಬಲವಂತ ಮಾಡಿ ಬ್ಲೇಡ್​ನಿಂದ ಮೈ-ಕೈ ಮೇಲೆ ಹಲ್ಲೆ ನಡೆಸಿದ್ದರು. ಆಕೆಯ ಕೂಗು ಕೇಳಬಾರದು ಎಂದು ಜೋರಾಗಿ ಸಂಗೀತವನ್ನು ಹಾಕಿದ್ದರು. ಯುವತಿ ಮೃತಪಟ್ಟ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ, ಎರಡು ದಿನಗಳ ಕಾಲ ಜೋರಾಗಿ ಸಂಗೀತ ಕೇಳಿಸುತ್ತಿದ್ದ ಕಾರಣ ಅಕ್ಕ ಪಕ್ಕದ ಮನೆಯವರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸಮೀನಾ ಅವರು ಬರ್ತ್​ ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಗಾಜಿಯಾಬಾದ್​ನಲ್ಲಿರುವ ಸಂಬಂಧಿಕರಾದ ಹೀನಾ ಹಾಗೂ ರಮೇಶ್ ಮನೆಗೆ ಹೋಗಿದ್ದರು. ಮನೆಯಲ್ಲಿ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳುವಾಗಿದೆ ಅದನ್ನು ಸಮೀನಾ ಕದ್ದಿದ್ದಾರೆ ಎಂದು ದಂಪತಿ ಶಂಕಿಸಿದ್ದಾರೆ.

ಯುವತಿಯ ಮೇಲೆ ಅವರು ರಾಡ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಆಕೆಯ ದೇಹವನ್ನು ಬ್ಲೇಡ್​ನಿಂದ ಕತ್ತರಿಸಿದ್ದರು, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಮ್ಯೂಸಿಕ್ ಹಾಕಿದ್ದರು.

ಮತ್ತಷ್ಟು ಓದಿ:ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು

ಸಮೀನಾ ಸಾವನ್ನಪ್ಪಿದ್ದಾಳೆ ಎಂದು ತಿಳಿದಾಗ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ, ಸಂಗೀತ ಹಾಗೆಯೇ ಕೇಳುತ್ತಿತ್ತು. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?