AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು
ಸಾವುImage Credit source: Indian Express
ನಯನಾ ರಾಜೀವ್
|

Updated on: Jun 22, 2023 | 7:49 AM

Share

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ.ಯುವತಿಯನ್ನು ತಪ್ಪೊಪ್ಪಿಕೊಳ್ಳುವಂತೆ ಬಲವಂತ ಮಾಡಿ ಬ್ಲೇಡ್​ನಿಂದ ಮೈ-ಕೈ ಮೇಲೆ ಹಲ್ಲೆ ನಡೆಸಿದ್ದರು. ಆಕೆಯ ಕೂಗು ಕೇಳಬಾರದು ಎಂದು ಜೋರಾಗಿ ಸಂಗೀತವನ್ನು ಹಾಕಿದ್ದರು. ಯುವತಿ ಮೃತಪಟ್ಟ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ, ಎರಡು ದಿನಗಳ ಕಾಲ ಜೋರಾಗಿ ಸಂಗೀತ ಕೇಳಿಸುತ್ತಿದ್ದ ಕಾರಣ ಅಕ್ಕ ಪಕ್ಕದ ಮನೆಯವರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸಮೀನಾ ಅವರು ಬರ್ತ್​ ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಗಾಜಿಯಾಬಾದ್​ನಲ್ಲಿರುವ ಸಂಬಂಧಿಕರಾದ ಹೀನಾ ಹಾಗೂ ರಮೇಶ್ ಮನೆಗೆ ಹೋಗಿದ್ದರು. ಮನೆಯಲ್ಲಿ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳುವಾಗಿದೆ ಅದನ್ನು ಸಮೀನಾ ಕದ್ದಿದ್ದಾರೆ ಎಂದು ದಂಪತಿ ಶಂಕಿಸಿದ್ದಾರೆ.

ಯುವತಿಯ ಮೇಲೆ ಅವರು ರಾಡ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಆಕೆಯ ದೇಹವನ್ನು ಬ್ಲೇಡ್​ನಿಂದ ಕತ್ತರಿಸಿದ್ದರು, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಮ್ಯೂಸಿಕ್ ಹಾಕಿದ್ದರು.

ಮತ್ತಷ್ಟು ಓದಿ:ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು

ಸಮೀನಾ ಸಾವನ್ನಪ್ಪಿದ್ದಾಳೆ ಎಂದು ತಿಳಿದಾಗ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ, ಸಂಗೀತ ಹಾಗೆಯೇ ಕೇಳುತ್ತಿತ್ತು. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ