AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿಕೊಂದ ಪತ್ನಿ

ಪತ್ನಿ ದಪ್ಪಗಿದ್ದಾಳೆ ಎಂದು ಪದೇ-ಪದೇ ಹೀಯಾಳಿಸುತ್ತಿದ್ದ ಪತಿ ದುರಂತ ಅಂತ್ಯ ಕಂಡಿದ್ದಾನೆ. ಗಂಡನ ಕಿರಿಕಿರಿಗೆ ಬೇಸತ್ತ ಪತ್ನಿ ಒಂದು ದಿನ ಆತನ ಮರ್ಮಾವನ್ನು ಕತ್ತರಿಸಿ ಕೊಲೆ ಮಾಡಿದ್ದಾಳೆ.

ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿಕೊಂದ ಪತ್ನಿ
ಸಾಂದರ್ಭಿಕ ಚಿತ್ರImage Credit source: India.com
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Sep 28, 2022 | 8:09 PM

Share

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಪ್ರತಿನಿತ್ಯ ಹೀಯಾಳಿಸುತ್ತಿದ್ದ ಪತಿಯನ್ನೇ ಪತ್ನಿ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾಳೆ, ಈ  ಆಘಾತಕಾರಿ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನಂತ್ ಸೋನ್ವಾನಿ ಪತ್ನಿಯಿಂದ ಹತ್ಯೆಯಾದ ಪತಿ. ಆರೋಪಿ ಪತ್ನಿ ಸಂಗೀತಾ ಸೋನ್ವಾನಿ ಬಂಧಿಸಿರುವುದಾಗಿ ಪಟಾಣ್ ಪ್ರದೇಶ ಪೊಲೀಸ್ ಉಪವಿಭಾಗಾಧಿಕಾರಿ ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಇನ್ನು, ಮೃತ ಪತಿಗೆ ಇದು ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ಮೃತಪಟ್ಟ ಬಳಿಕ ನಂತ್, ಸಂಗೀತಾಳನ್ನು ಮದುವೆಯಾಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರೀತಿಸಿ ಹಿಂದೂ ಯುವತಿಯನ್ನ ಮದ್ವೆಯಾದ ಮುಸ್ಲಿಂ ವ್ಯಕ್ತಿ, ಬುರ್ಖಾ ಧರಿಸಲಿಲ್ಲವೆಂದು ಆಕೆಯನ್ನ ಕೊಂದೇ ಬಿಟ್ಟ!

ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ ಆಗಾಗ ನಿಂದಿಸುತ್ತಿದ್ದ. ಇದೇ ವಿಚಾರವಾಗಿ ಹಲವಾರು ಬಾರಿ ನಮ್ಮಿಬ್ಬರ ನಡುವೆ ಜಗಳ ಕೂಡ ನಡೆದಿತ್ತು. ಭಾನುವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ ಕೋಪದಿಂದ ಮನೆಯಲ್ಲಿದ್ದ ಕೊಡಲಿಯಿಂದ ನನ್ನ ಪತಿಯ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ನನ್ನ ಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಆರೋಪಿ ಸಂಗೀತಾ ಪೊಲೀಸರ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ.

ಪೊಲೀಸ್‌ ವಿಚಾರಣೆ ವೇಳೆ ಕೊಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದು, ಮಹಿಳೆ ವಿರುದ್ಧ ಐಪಿಸಿ ಕಾಯ್ದೆ 302 (ಕೊಲೆ) ಹಾಗೂ ಇತರೆ ಸಂಬಂಧಿತ ಸೆಕ್ಷನ್‌ಗಳನ್ನು ಹಾಕಲಾಗಿದೆ ಮತ್ತು ಈ ಸಂಬಂಧ ತನಿಖೆ ಮುಂದುವರಿದಿದೆ ಎಂದೂ ಛತ್ತೀಸ್‌ಗಢದ ಪಟಾಣ್‌ ಪ್ರದೇಶದ ಪೊಲೀಸ್‌ ಉಪವಿಭಾಗಾಧಿಕಾರಿ ದೇವಾನ್ಶ್‌ ರಾಥೋರ್‌ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Wed, 28 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!