AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿಕೊಂದ ಪತ್ನಿ

ಪತ್ನಿ ದಪ್ಪಗಿದ್ದಾಳೆ ಎಂದು ಪದೇ-ಪದೇ ಹೀಯಾಳಿಸುತ್ತಿದ್ದ ಪತಿ ದುರಂತ ಅಂತ್ಯ ಕಂಡಿದ್ದಾನೆ. ಗಂಡನ ಕಿರಿಕಿರಿಗೆ ಬೇಸತ್ತ ಪತ್ನಿ ಒಂದು ದಿನ ಆತನ ಮರ್ಮಾವನ್ನು ಕತ್ತರಿಸಿ ಕೊಲೆ ಮಾಡಿದ್ದಾಳೆ.

ನೀನು ಕಪ್ಪಗಿದ್ದೀಯಾ ಅಂತ ಪದೇ-ಪದೇ ರೇಗಿಸುತ್ತಿದ್ದ ಪತಿಯ ಮರ್ಮಾಂಗವನ್ನೇ ಕತ್ತರಿಸಿಕೊಂದ ಪತ್ನಿ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on:Sep 28, 2022 | 8:09 PM

Share

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಪ್ರತಿನಿತ್ಯ ಹೀಯಾಳಿಸುತ್ತಿದ್ದ ಪತಿಯನ್ನೇ ಪತ್ನಿ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾಳೆ, ಈ  ಆಘಾತಕಾರಿ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನಂತ್ ಸೋನ್ವಾನಿ ಪತ್ನಿಯಿಂದ ಹತ್ಯೆಯಾದ ಪತಿ. ಆರೋಪಿ ಪತ್ನಿ ಸಂಗೀತಾ ಸೋನ್ವಾನಿ ಬಂಧಿಸಿರುವುದಾಗಿ ಪಟಾಣ್ ಪ್ರದೇಶ ಪೊಲೀಸ್ ಉಪವಿಭಾಗಾಧಿಕಾರಿ ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಇನ್ನು, ಮೃತ ಪತಿಗೆ ಇದು ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ಮೃತಪಟ್ಟ ಬಳಿಕ ನಂತ್, ಸಂಗೀತಾಳನ್ನು ಮದುವೆಯಾಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರೀತಿಸಿ ಹಿಂದೂ ಯುವತಿಯನ್ನ ಮದ್ವೆಯಾದ ಮುಸ್ಲಿಂ ವ್ಯಕ್ತಿ, ಬುರ್ಖಾ ಧರಿಸಲಿಲ್ಲವೆಂದು ಆಕೆಯನ್ನ ಕೊಂದೇ ಬಿಟ್ಟ!

ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ ಆಗಾಗ ನಿಂದಿಸುತ್ತಿದ್ದ. ಇದೇ ವಿಚಾರವಾಗಿ ಹಲವಾರು ಬಾರಿ ನಮ್ಮಿಬ್ಬರ ನಡುವೆ ಜಗಳ ಕೂಡ ನಡೆದಿತ್ತು. ಭಾನುವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ ಕೋಪದಿಂದ ಮನೆಯಲ್ಲಿದ್ದ ಕೊಡಲಿಯಿಂದ ನನ್ನ ಪತಿಯ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ನನ್ನ ಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಆರೋಪಿ ಸಂಗೀತಾ ಪೊಲೀಸರ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ.

ಪೊಲೀಸ್‌ ವಿಚಾರಣೆ ವೇಳೆ ಕೊಲೆ ಮಾಡಿರುವುದನ್ನು ಮಹಿಳೆ ಒಪ್ಪಿಕೊಂಡಿದ್ದು, ಮಹಿಳೆ ವಿರುದ್ಧ ಐಪಿಸಿ ಕಾಯ್ದೆ 302 (ಕೊಲೆ) ಹಾಗೂ ಇತರೆ ಸಂಬಂಧಿತ ಸೆಕ್ಷನ್‌ಗಳನ್ನು ಹಾಕಲಾಗಿದೆ ಮತ್ತು ಈ ಸಂಬಂಧ ತನಿಖೆ ಮುಂದುವರಿದಿದೆ ಎಂದೂ ಛತ್ತೀಸ್‌ಗಢದ ಪಟಾಣ್‌ ಪ್ರದೇಶದ ಪೊಲೀಸ್‌ ಉಪವಿಭಾಗಾಧಿಕಾರಿ ದೇವಾನ್ಶ್‌ ರಾಥೋರ್‌ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Wed, 28 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ