AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನದಿಂದ ನಾಪತ್ತೆಯಾಗಿದ್ದ ಮಹಿಳೆ ದರ್ಗಾ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ, ಕೊಲೆ ಆಗಿದ್ದೇಕೆ?

ಮೇಲ್ನೂಟಕ್ಕೆ ಮೃತ ಫಾತಿಮಾಗೆ ಯಾವುದೇ ಶತ್ರುಗಳಿಲ್ಲ. ಸಂಬಳ ವಿಚಾರವಾಗಿ ತಿಂಗಳ ಹಿಂದೆ ಗಾರ್ಮೆಂಟ್ಸ್ ನಲ್ಲಿ ಜಗಳ ನಡೆದಿದ್ದಾಗಿ ಮನೆಯವರ ಬಳಿ ಹೇಳಿಕೊಂಡಿದ್ಲಂತೆ. ಇದಾದ ನಂತರ ಆಕೆ ಶವವಾಗಿ ಪತ್ತೆಯಾಗಿದ್ದು ಯಾರೊ ದ್ವೇಷದಿಂದಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ನಂದಗುಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

5 ದಿನದಿಂದ ನಾಪತ್ತೆಯಾಗಿದ್ದ ಮಹಿಳೆ ದರ್ಗಾ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ, ಕೊಲೆ ಆಗಿದ್ದೇಕೆ?
ನಾಪತ್ತೆಯಾಗಿದ್ದ ಮಹಿಳೆ ದರ್ಗಾ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ನವೀನ್ ಕುಮಾರ್ ಟಿ
| Edited By: |

Updated on: Jan 11, 2024 | 11:18 AM

Share

ಆ ಕುಟುಂಬಸ್ಥರು ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಮನೆ ಒಡತಿ ಸಿಗಲಿ ಅಂತ ಆ ದರ್ಗಾ ಬಳಿ ಹೋಗಿ ಪ್ರಾರ್ಥನೆ ಮಾಡ್ತಿದ್ರು. ಜೊತೆಗೆ ಇಂದಲ್ಲ ನಾಳೆ ಮನೆಗೆ ಬಂದೆ ಬರ್ತಾಳೆ ಅನ್ನೂ ನಂಬಿಕೆಯಲ್ಲಿಯೂ ಇದ್ರು. ಜೊತೆಗೆ ಕುಟುಂಬಸ್ಥರ ನಂಬಿಕೆಯಂತೆ ನಾಪತ್ತೆಯಾದ 5 ದಿನಗಳ ಬಳಿಕ ಮನೆ ಒಡತಿ ದರ್ಗಾ ಬಳಿ ಸಿಕ್ಕಿದ್ದು ಮಹಿಳೆಯ ಸ್ಥಿತಿ ಕಂಡು ಕುಟುಂಬಸ್ಥರ ಜೊತೆಗೆ ಗ್ರಾಮಸ್ಥರು ಸಹ ಬೆಚ್ಚಿ ಬಿದ್ದಿದ್ದಾರೆ. ಅದು ಯಾಕೆ ಅನ್ನೂದನ್ನ ನೀವೆ ನೋಡಿ.

ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ ಪೂಜೆ ಪುನಸ್ಕಾರದಿಂದ ತುಂಬಿರಬೇಕಿದ್ದ ದರ್ಗಾದಿಂದ ಕೂದಲಳತೆ ಅಂತರದಲ್ಲೆ ಗ್ರಾಮದ ಮಹಿಳೆ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾಳೆ. ಎಲ್ಲೋ ಹೋಗಿರ್ತಾಳೆ ಬರ್ತಾಳೆ ಅಂತ ಎಲ್ಲೆಡೆ ಹುಡುಕಾಡಿದ್ದ ಕುಟುಂಬಸ್ಥರು ಮನೆ ಒಡತಿಯ ದುರಂತ ಅಂತ್ಯ ಕಂಡು ಒಂದು ಕ್ಷಣ ಶಾಕ್ ಆಗಿದ್ದು ಎಲ್ಲರೂ ಮೌನಕ್ಕೆ ಜಾರಿದ್ದಾರೆ. ಹೌದು ಅಂದಹಾಗೆ ಇಲ್ಲಿ ಈ ರೀತಿ ಭೀಕರವಾಗಿ ಕೊಲೆಯಾಗಿರುವ ಮಹಿಳೆ ಫಾತಿಮಾ.

ಹೌದು ಅಂದಹಾಗೆ ಫಾತಿಮಾ ಅನ್ನೂ 50 ವರ್ಷದ ಈ ಮಹಿಳೆ ಕುಟುಂಬಕ್ಕೆ ಅಸರೆಯಾಗೋಕ್ಕೆ ಅಂತ ಗಾರ್ಮೆಂಟ್ಸ್ ಒಂದಕ್ಕೆ ಕೆಲಸಕ್ಕೆ ಹೋಗ್ತಿದ್ದು, ನಿತ್ಯ ಸಂಜೆ ಮನೆಗೆ ವಾಪಸ್ ಆಗ್ತಿದ್ಲು. ಆದ್ರೆ ನಿತ್ಯ ವಾಪಸ್ ಬರ್ತಿದ್ದ ಮಹಿಳೆ ಕಳೆದ 5ನೇ ತಾರೀಕು ಕೆಲಸಕ್ಕೆ ಹೋಗಿದ್ದವಳು ಸಂಜೆ ಸಂಬಂಧಿಯ ಜೊತೆ ಗ್ರಾಮದ ಗೇಟ್ ಗೆ ಬಂದಿದ್ದರೂ ಮನೆಗೆ ಮಾತ್ರ ವಾಪಸ್ ಆಗಿರಲಿಲ್ಲ.

ಹೀಗಾಗಿ ಎಲ್ಲೆಡೆ ಮಹಿಳೆಗಾಗಿ ಹುಡುಕಾಟ ನಡೆಸಿದ್ದ ಕುಟುಂಬಸ್ಥರು ಎಲ್ಲೂ ಕಾಣದಿದ್ದಾಗ ಆತಂಕಕ್ಕೀಡಾಗಿ ನಂದಗುಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ರು. ಆದ್ರೆ ದೂರು ದಾಖಲಾದ ಐದು ದಿನಗಳ ನಂತರ ಮಹಿಳೆ ಗ್ರಾಮದ ಹೊರ ವಲಯದಲ್ಲಿರುವ ದರ್ಗಾದ ಬಳಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೆಳಗ್ಗೆ ಕುರಿಗಾಹಿಗಳು ನಾಯಿಗಳು ಕಚ್ಚುತ್ತಿದ್ದನ್ನ ಕಂಡು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ನೋಡಿದಾಗ ನಾಪತ್ತೆಯಾಗಿದ್ದ ಫಾತಿಮಾ ಶವವಾಗಿ ಪತ್ತೆಯಾಗಿದ್ದಾಳೆ.

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹೊಡೆದು ಭೀಕರವಾಗಿ ಫಾತಿಮಾಳನ್ನ ಕೊಲೆ ಮಾಡಿದ್ದು ಮುಖ ಸಹ ಗುರುತು ಸಿಗದಂತೆ ಮಹಿಳೆಯ ಮೃತದೇಹವನ್ನ ಹೊಡೆದು ಕೊಲೆ ಮಾಡಿದ್ದಾರೆ. ಜೊತೆಗೆ ಕೊಲೆ ಮಾಡಿದ ನಂತರ ಮೃತದೇಹ ಯಾರಿಗೂ ಕಾಣದಂತೆ ಅದರ ಮೇಲೆ ಗಿಡ ಗಂಟಿಗಳನ್ನ ಹಾಕಿ ಮುಚ್ಚಿ ಹಾಕಿದ್ದು ನಿನ್ನೆ ಬುಧವಾರ ನಾಯಿಗಳಿಂದ ಮೃತದೇಹ ಹೊರಗಡೆ ಬಂದಿದೆ.

Also Read: ಚಪಲಕ್ಕೆ ಬಿದ್ದವಳಿಂದ ಗಂಡನ ಕೊಲೆ: ಬೇತಮಂಗಲ, ವೈಟ್​ಫೀಲ್ಡ್​, ಕೋಗಿಲಹಳ್ಳಿ, ಚಿಂತಾಮಣಿ ಸುತ್ತು ಬಳಸಿ ನಡೆದಿದ್ದ ಕೊಲೆ ಕೇಸ್ ಬಹಿರಂಗ

ಅಲ್ಲದೆ ಮೇಲ್ನೂಟಕ್ಕೆ ಮೃತ ಫಾತಿಮಾಗೆ ಯಾವುದೇ ಶತ್ರುಗಳು ಇಲ್ಲ. ಕಳೆದ ತಿಂಗಳ ಸಂಬಳ ವಿಚಾರವಾಗಿ ಗಾರ್ಮೆಂಟ್ಸ್ ನಲ್ಲಿ ಜಗಳ ನಡೆದಿದ್ದಾಗಿ ಮನೆಯವರ ಬಳಿ ಹೇಳಿಕೊಂಡಿದ್ಲಂತೆ. ಇದಾದ ನಂತರ ಆಕೆ ಶವವಾಗಿ ಪತ್ತೆಯಾಗಿದ್ದು ಯಾರೊ ದ್ವೇಷದಿಂದಲೆ ಕೊಲೆ ಮಾಡಿರುವ ಶಂಕೆಯನ್ನ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನಂದಗುಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.

ಒಟ್ಟಾರೆ ಎಲ್ಲೋ ಹೋಗಿದ್ದಾಳೆ ಬರ್ತಾಳೆ ಅಂದುಕೊಂಡಿದ್ದ ಕುಟುಂಬಸ್ಥರಿಗೆ ಮಹಿಳೆ ಗ್ರಾಮದ ಹೊರವಲಯದಲ್ಲೆ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಇನ್ನು ಈ ಬಗ್ಗೆ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಪೊಲೀಸರ ತನಿಖೆಯಿಂದಷ್ಟೆ ಮಹಿಳೆಯ ಕೊಲೆ ರಹಸ್ಯ ಬೆಳಕಿಗೆ ಬರಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ