AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿ ಹೊಲದಲ್ಲಿ ಕುಡುಗೋಲಿನಿಂದ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೆ. ಸತ್ಯವಾರ ಗ್ರಾಮದಲ್ಲಿ ಸೊಂಪಾಗಿ ಬೆಳೆದು ನಿಂತಿರುವ ರಾಗಿ ಹೊಲದಲ್ಲಿ ನೆತ್ತರು ಹರಿದಿದೆ. ನಿನ್ನೆ ಗ್ರಾಮದ ನಾರಾಯಣಮ್ಮ ಎಂಬುವರು ಗ್ರಾಮದ ಮಹಿಳೆಯರ ಜೊತೆ ರಾಗಿ ಹೊಲದಲ್ಲಿ ತೆನೆ ಕೊಯ್ಯಲು ಹೋಗಿದ್ರು. ಆದ್ರೆ ಸಂಜೆ ಗ್ರಾಮದ ಮಹಿಳೆಯರೆಲ್ಲ ಮನೆಗೆ ವಾಪಸಾಗಿದ್ದರೂ ಆಕೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಎಲ್ಲೋ ಹೊಗಿರ್ತಾಳೆ ಬರ್ತಾಳೆ ಅಂದುಕೊಂಡಿದ್ದ ಕುಟುಂಬಸ್ಥರಿಗೆ ಕತ್ತಲಾದ್ರು ಆಕೆ ಬಾರದಿದ್ದಾಗ ಊರೆಲ್ಲ ಹುಡುಕಾಡಿ ಕೊನೆಗೆ ಹೊಲದ ಕಡೆ ಹೋಗಿದ್ದಾರೆ. ಈ ವೇಳೆ ರಾಗಿ ಹೊಲದಲ್ಲಿ […]

ರಾಗಿ ಹೊಲದಲ್ಲಿ ಕುಡುಗೋಲಿನಿಂದ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 4:30 PM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೆ. ಸತ್ಯವಾರ ಗ್ರಾಮದಲ್ಲಿ ಸೊಂಪಾಗಿ ಬೆಳೆದು ನಿಂತಿರುವ ರಾಗಿ ಹೊಲದಲ್ಲಿ ನೆತ್ತರು ಹರಿದಿದೆ. ನಿನ್ನೆ ಗ್ರಾಮದ ನಾರಾಯಣಮ್ಮ ಎಂಬುವರು ಗ್ರಾಮದ ಮಹಿಳೆಯರ ಜೊತೆ ರಾಗಿ ಹೊಲದಲ್ಲಿ ತೆನೆ ಕೊಯ್ಯಲು ಹೋಗಿದ್ರು.

ಆದ್ರೆ ಸಂಜೆ ಗ್ರಾಮದ ಮಹಿಳೆಯರೆಲ್ಲ ಮನೆಗೆ ವಾಪಸಾಗಿದ್ದರೂ ಆಕೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಎಲ್ಲೋ ಹೊಗಿರ್ತಾಳೆ ಬರ್ತಾಳೆ ಅಂದುಕೊಂಡಿದ್ದ ಕುಟುಂಬಸ್ಥರಿಗೆ ಕತ್ತಲಾದ್ರು ಆಕೆ ಬಾರದಿದ್ದಾಗ ಊರೆಲ್ಲ ಹುಡುಕಾಡಿ ಕೊನೆಗೆ ಹೊಲದ ಕಡೆ ಹೋಗಿದ್ದಾರೆ. ಈ ವೇಳೆ ರಾಗಿ ಹೊಲದಲ್ಲಿ ರಾಗಿ ತೆನೆ ಕೊಯ್ಯಲು ತಂದಿದ್ದ ಕೊಡುಗೋಲಿನಿಂದಲೆೇ ಕತ್ತು ಕೊಯ್ದಿರೂ ಸ್ಥಿತಿಯಲ್ಲಿ ನಾರಾಯಣಮ್ಮನ ಮೃತದೇಹ ಪತ್ತೆಯಾಗಿದೆ.

ಮನೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ, ಎಲ್ಲರೊಂದಿಗೆ ಚೆನ್ನಾಗಿದ್ದ ನಾರಾಯಣಮ್ಮ ಎಂದಿನಂತೆ ಹೊಲದಲ್ಲಿ ರಾಗಿ ತೆನೆ ಕೊಯ್ಯಲು ಹೋಗಿದ್ಲಂತೆ. ಆದ್ರೆ ಮುಸ್ಸಂಜೆ ವೇಳೆ ಇದ್ದಕ್ಕಿದ್ದ ಹಾಗೇ ಮಹಿಳೆ ಅನುಮಾನಸ್ಪಾದ ರೀತಿಯಲ್ಲಿ ಬರ್ಬರವಾಗಿ ಸಾವಿಗೀಡಾಗಿರೋದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸದ್ಯ ಈ ಬಗ್ಗೆ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ತನಿಖೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೋದು ಬೆಳಕಿಗೆ ಬರಬೇಕಿದೆ. ಆದ್ರೆ ಈ ಸಾವು ಗ್ರಾಮಸ್ಥರನ್ನ ಬೆಚ್ಚಿ ಬೀಳಿಸಿರುವುದಂತೂ ಸುಳ್ಳಲ್ಲ.

Published On - 4:29 pm, Sat, 30 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​