AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತ್ತು ಬರುವ ಔಷಧಿ ನೀಡಿ ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ

ಮೆಜೆಸ್ಟಿಕ್​ನಲ್ಲಿ ಮಾಧವಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರ ಬಳಿಯಿಂದ ಚಿನ್ನಾಭರಣ ದೋಚಿದ ಆರೋಪ ಕೇಳಿಬಂದಿದೆ. ಆದರೆ ಪೊಲೀಸರು ದೂರು ನೀಡಿದ ವೃದ್ಧನ ಮೇಲೆಯೇ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮತ್ತು ಬರುವ ಔಷಧಿ ನೀಡಿ ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ
ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Jun 22, 2023 | 4:08 PM

Share

ಬೆಂಗಳೂರು: ನಗರದ ಮೆಜೆಸ್ಟಿಕ್​ನಲ್ಲಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರಿಗೆ ಮತ್ತು ಬರುವ ಔಷಧಿ ನೀಡಿ ಚಿನ್ನಾಭರಣ ಲೂಟಿ (Robbery) ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಆಭರಣಗಳನ್ನು ಕಳೆದುಕೊಂಡ ವೃದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ತನಿಖೆಗೆ ಇಳಿದ ಪೊಲೀಸರಿಗೆ ದೂರು ಕೊಟ್ಟ ವೃದ್ಧನ ಮೇಲೆಯೇ ಅನುಮಾನ ವ್ಯಕ್ತವಾಗಿದೆ.

ವೃದ್ಧ ನಾಗರಾಜು ಎಂಬವರಿಗೆ ಮೆಜೆಸ್ಟಿಕ್​ನಲ್ಲಿ ಮಾಧವಿ ಎಂಬ ಮಿಳೆ ಪರಿಚಯವಾಗಿದ್ದಾಳೆ. ಹೀಗೆ ಪರಿಚಯವಾಗಿದ್ದಾಕೆ ನಾಗರಾಜು ಜೊತೆ ಸಿನಿಮಾ ನೋಡಲೆಂದು ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್​ಗೆ ಕರೆದುಕೊಂಡು ಹೋಗಿದ್ದಾಳೆ. ಈ ವೇಳೆ ಮತ್ತು ಬರುವ ಔಷಧಿ ನೀಡಿ 3 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿ ಸಿನಿಮಾ ಮಧ್ಯೆಯೇ ಹೊರಟು ಹೋಗಿದ್ದಾಳೆ ಎಂದು ಆರೋಪಿಸಲಾಗಿದೆ.

ಜೂನ್ 12 ರಂದು 12.30 ಕ್ಕೆ ನಡೆದ ಘಟನೆ ಇದಾಗಿದ್ದು, ನಾಗರಾಜು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆರಂಭಿಸಿದ್ದಾರೆ. ಅದರಂತೆ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ನಾಗರಾಜು ಹಾಗೂ ಮಹಿಳೆ ನಗು ನಗುತ್ತಲೆ ಮಂತ್ರಿ ಮಾಲ್​ನಿಂದ ತೆರಳಿರುವುದು ಸೆರೆಯಾಗಿದೆ. ಹೀಗಾಗಿ ನಾಗರಾಜು ನೀಡಿದ ದೂರಿನ‌ ಮೇಲೆಯೇ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ವೃದ್ಧನನ್ನ ಬ್ಲಾಕ್ ಮೇಲೆ ಮಾಡಿ ಚಿನ್ನಾಭರಣ ಪಡೆದಿರುವ ಸಾಧ್ಯತೆಯೂ ಇದೆ. ಸದ್ಯ ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಪುಡಿ ರೌಡಿ ಪುಂಡಾಟ ನಡೆಸಿ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೌಸಿಫ್ (22) ಬಂಧಿತ ಆರೋಪಿ. ಈತನ ತನಿಖೆ ವೇಳೆ ಮತ್ತೊಂದು ಸೆಕ್ಯೂರಿಟಿಗಾರ್ಡ್​ ಮೇಲೆ ನಡೆಸಿದ್ದ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಜೂನ್ 18ರ ರಾತ್ರಿ ಬೊಮ್ಮಾಯಿ ಮನೆಯ ಕೊಂಚ ದೂರದಲ್ಲೇ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ತೌಸಿಫ್, ಸಂಜಯ್ ನಗರದಲ್ಲಿ ಇತ್ತಿಚೆಗೆ ಸೆಕ್ಯೂರಿಟಿ ಮೇಲೆ ಹಲ್ಲೆ ನಡೆಸಿರುವುದನ್ನು ಬಾಯಿಬಿಟ್ಟಿದ್ದಾನೆ. ಅಲ್ಲದೆ, ಈ ಪ್ರಕರಣ ಸಂಬಂಧ ಸಂಜಯ್ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಇದರ ಜೊತೆಗೆ ಸುಲಿಗೆ ಪ್ರಕರಣ ಸೇರಿದಂತೆ 6 ವಿವಿಧ ಪ್ರಕರಣಗಳು ತೌಸಿಫ್ ವಿರುದ್ಧ ದಾಖಲಾಗಿದೆ. ಸದ್ಯ ತನಿಖೆ ನಡೆಸುತ್ತಿರುವ ಆರ್​ಟಿ ನಗರ ಪೊಲೀಸರು ಆರೋಪಿ ವಿರುದ್ಧ ರೌಡಿಪಟ್ಟಿ ತೆರೆಯಲು ಚಿಂತನೆ ನಡೆಸುತ್ತಿದ್ದಾರೆ.

ಮಲ್ಲೇಶ್ವರಂ ರೈಲು ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ನಗರದ ಮಲ್ಲೇಶ್ವರಂ ರೈಲು ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮಾಹಿತಿ ತಿಳಿದ ರೈಲ್ವೇ ಠಾಣೆ ಪೊಲೀಸರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದಾರೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ರೈಲ್ವೆ ಪೊಲೀಸರು ಮುಂದಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆ ಎಂಬುದರ ಬಗ್ಗೆ ಪತ್ತೆ ಕಾರ್ಯ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ