AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತ್ತು ಬರುವ ಔಷಧಿ ನೀಡಿ ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ

ಮೆಜೆಸ್ಟಿಕ್​ನಲ್ಲಿ ಮಾಧವಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರ ಬಳಿಯಿಂದ ಚಿನ್ನಾಭರಣ ದೋಚಿದ ಆರೋಪ ಕೇಳಿಬಂದಿದೆ. ಆದರೆ ಪೊಲೀಸರು ದೂರು ನೀಡಿದ ವೃದ್ಧನ ಮೇಲೆಯೇ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮತ್ತು ಬರುವ ಔಷಧಿ ನೀಡಿ ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ
ವೃದ್ಧನ ಬಳಿ ಇದ್ದ ಚಿನ್ನಾಭರಣ ಲೂಟಿ ಮಾಡಿದ ಮಹಿಳೆ (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Jun 22, 2023 | 4:08 PM

Share

ಬೆಂಗಳೂರು: ನಗರದ ಮೆಜೆಸ್ಟಿಕ್​ನಲ್ಲಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರಿಗೆ ಮತ್ತು ಬರುವ ಔಷಧಿ ನೀಡಿ ಚಿನ್ನಾಭರಣ ಲೂಟಿ (Robbery) ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಆಭರಣಗಳನ್ನು ಕಳೆದುಕೊಂಡ ವೃದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ತನಿಖೆಗೆ ಇಳಿದ ಪೊಲೀಸರಿಗೆ ದೂರು ಕೊಟ್ಟ ವೃದ್ಧನ ಮೇಲೆಯೇ ಅನುಮಾನ ವ್ಯಕ್ತವಾಗಿದೆ.

ವೃದ್ಧ ನಾಗರಾಜು ಎಂಬವರಿಗೆ ಮೆಜೆಸ್ಟಿಕ್​ನಲ್ಲಿ ಮಾಧವಿ ಎಂಬ ಮಿಳೆ ಪರಿಚಯವಾಗಿದ್ದಾಳೆ. ಹೀಗೆ ಪರಿಚಯವಾಗಿದ್ದಾಕೆ ನಾಗರಾಜು ಜೊತೆ ಸಿನಿಮಾ ನೋಡಲೆಂದು ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್​ಗೆ ಕರೆದುಕೊಂಡು ಹೋಗಿದ್ದಾಳೆ. ಈ ವೇಳೆ ಮತ್ತು ಬರುವ ಔಷಧಿ ನೀಡಿ 3 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿ ಸಿನಿಮಾ ಮಧ್ಯೆಯೇ ಹೊರಟು ಹೋಗಿದ್ದಾಳೆ ಎಂದು ಆರೋಪಿಸಲಾಗಿದೆ.

ಜೂನ್ 12 ರಂದು 12.30 ಕ್ಕೆ ನಡೆದ ಘಟನೆ ಇದಾಗಿದ್ದು, ನಾಗರಾಜು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆರಂಭಿಸಿದ್ದಾರೆ. ಅದರಂತೆ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ವೇಳೆ ನಾಗರಾಜು ಹಾಗೂ ಮಹಿಳೆ ನಗು ನಗುತ್ತಲೆ ಮಂತ್ರಿ ಮಾಲ್​ನಿಂದ ತೆರಳಿರುವುದು ಸೆರೆಯಾಗಿದೆ. ಹೀಗಾಗಿ ನಾಗರಾಜು ನೀಡಿದ ದೂರಿನ‌ ಮೇಲೆಯೇ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ವೃದ್ಧನನ್ನ ಬ್ಲಾಕ್ ಮೇಲೆ ಮಾಡಿ ಚಿನ್ನಾಭರಣ ಪಡೆದಿರುವ ಸಾಧ್ಯತೆಯೂ ಇದೆ. ಸದ್ಯ ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಪುಡಿ ರೌಡಿ ಪುಂಡಾಟ ನಡೆಸಿ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೌಸಿಫ್ (22) ಬಂಧಿತ ಆರೋಪಿ. ಈತನ ತನಿಖೆ ವೇಳೆ ಮತ್ತೊಂದು ಸೆಕ್ಯೂರಿಟಿಗಾರ್ಡ್​ ಮೇಲೆ ನಡೆಸಿದ್ದ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಜೂನ್ 18ರ ರಾತ್ರಿ ಬೊಮ್ಮಾಯಿ ಮನೆಯ ಕೊಂಚ ದೂರದಲ್ಲೇ ಸೆಕ್ಯೂರಿಟಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ತೌಸಿಫ್, ಸಂಜಯ್ ನಗರದಲ್ಲಿ ಇತ್ತಿಚೆಗೆ ಸೆಕ್ಯೂರಿಟಿ ಮೇಲೆ ಹಲ್ಲೆ ನಡೆಸಿರುವುದನ್ನು ಬಾಯಿಬಿಟ್ಟಿದ್ದಾನೆ. ಅಲ್ಲದೆ, ಈ ಪ್ರಕರಣ ಸಂಬಂಧ ಸಂಜಯ್ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಇದರ ಜೊತೆಗೆ ಸುಲಿಗೆ ಪ್ರಕರಣ ಸೇರಿದಂತೆ 6 ವಿವಿಧ ಪ್ರಕರಣಗಳು ತೌಸಿಫ್ ವಿರುದ್ಧ ದಾಖಲಾಗಿದೆ. ಸದ್ಯ ತನಿಖೆ ನಡೆಸುತ್ತಿರುವ ಆರ್​ಟಿ ನಗರ ಪೊಲೀಸರು ಆರೋಪಿ ವಿರುದ್ಧ ರೌಡಿಪಟ್ಟಿ ತೆರೆಯಲು ಚಿಂತನೆ ನಡೆಸುತ್ತಿದ್ದಾರೆ.

ಮಲ್ಲೇಶ್ವರಂ ರೈಲು ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ನಗರದ ಮಲ್ಲೇಶ್ವರಂ ರೈಲು ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮಾಹಿತಿ ತಿಳಿದ ರೈಲ್ವೇ ಠಾಣೆ ಪೊಲೀಸರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದಾರೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ರೈಲ್ವೆ ಪೊಲೀಸರು ಮುಂದಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆ ಎಂಬುದರ ಬಗ್ಗೆ ಪತ್ತೆ ಕಾರ್ಯ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ