AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಲಿವ್ ಇನ್ ಸಂಗಾತಿಯನ್ನು ಕತ್ತು ಹಿಸುಕಿ ಕೊಂದು ಮನೆಯಿಂದ 12 ಕಿಮೀ ದೂರದಲ್ಲಿ ಶವ ಬಿಸಾಡಿದ ವ್ಯಕ್ತಿಗಾಗಿ ಪೊಲೀಸ್ ಶೋಧ

ಇವರಿಬ್ಬರು ನಾಲ್ಕು ವರ್ಷಗಳ ಹಿಂದೆ ಓಡಿ ಹೋಗಿ ಸಂಸಾರ ಶುರು ಮಾಡಿದ್ದರು. ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಏಪ್ರಿಲ್ 12 ರಂದು ಇಬ್ಬರೂ ಈ ವಿಷಯದ ಬಗ್ಗೆ ಜಗಳವಾಡಿದ್ದು, ರೋಹಿನಾಳ ಸಂಗಾತಿ ಆಕೆ ಕತ್ತು ಹಿಸುಕಿ ಕೊಂದಿದ್ದಾನೆ

ದೆಹಲಿ: ಲಿವ್ ಇನ್ ಸಂಗಾತಿಯನ್ನು ಕತ್ತು ಹಿಸುಕಿ ಕೊಂದು ಮನೆಯಿಂದ 12 ಕಿಮೀ ದೂರದಲ್ಲಿ ಶವ ಬಿಸಾಡಿದ ವ್ಯಕ್ತಿಗಾಗಿ ಪೊಲೀಸ್ ಶೋಧ
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Apr 21, 2023 | 8:48 PM

Share

ದೆಹಲಿ: ಈಶಾನ್ಯ ದೆಹಲಿಯಲ್ಲಿ (Delhi) 25 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಸಂಗಾತಿ (live-in partner) ಕತ್ತು ಹಿಸುಕಿ ಕೊಲೆ ಮಾಡಿದ್ದು (Murder case) ಮೃತದೇಹವನ್ನು ಮನೆಯಿಂದ 12 ಕಿಮೀ ದೂರದಲ್ಲಿ ಎಸೆದಿರುವ ಪ್ರಕರಣ ವರದಿಯಾಗಿದೆ.ಏಪ್ರಿಲ್ 12 ರಂದು, ಮನೆಯ ಹೊರಗೆ ಶವ ಪತ್ತೆಯಾದ ಬಗ್ಗೆ ತಡರಾತ್ರಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಹಿಳೆಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ, ನಂತರ ಅದನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದು ಅಲ್ಲಿ ವೈದ್ಯರು ಸಾವಿನ ಕಾರಣ ಪತ್ತೆ ಹಚ್ಚಿದ್ದಾರೆ ಎಂಎಂದು ಉಪ ಪೊಲೀಸ್ ಆಯುಕ್ತ ಜಾಯ್ ಟಿರ್ಕಿ ಹೇಳಿರುವುದಾದಿ ಎನ್​​ಡಿಟಿವಿ ವರದಿ ಮಾಡಿದೆ. ರೋಹಿನಾ ಎಂದು ಗುರುತಿಸಲಾದ ಮಹಿಳೆ ತನ್ನ ಸಂಗಾತಿ ವಿನೀತ್ ಜೊತೆ ವಾಸಿಸುತ್ತಿದ್ದಳು. ಇವರಿಬ್ಬರು ನಾಲ್ಕು ವರ್ಷಗಳ ಹಿಂದೆ ಓಡಿ ಹೋಗಿ ಸಂಸಾರ ಶುರು ಮಾಡಿದ್ದರು. ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಏಪ್ರಿಲ್ 12 ರಂದು ಇಬ್ಬರೂ ಈ ವಿಷಯದ ಬಗ್ಗೆ ಜಗಳವಾಡಿದ್ದು, ರೋಹಿನಾಳ ಸಂಗಾತಿ ಆಕೆ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸಂಜೆ ವಿನೀತ್ ಶವವನ್ನು ಎಸೆಯಲು ತನ್ನ ಸ್ನೇಹಿತನಿಗೆ ಕರೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತನಿಖೆಗಾಗಿ 50 ಕ್ಕೂ ಹೆಚ್ಚು ಪೊಲೀಸರ ತಂಡವನ್ನು ರಚಿಸಲಾಗಿದೆ.

ಸಮೀಪದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನ ಸ್ಕ್ಯಾನ್ ಮಾಡಲಾಗಿದ್ದು, ಅಲ್ಲಿ ಇಬ್ಬರು ಪುರುಷರು ಬೈಕ್‌ನಲ್ಲಿ ಮಹಿಳೆಯ ಶವದೊಂದಿಗೆ ಕಾಣಿಸಿಕೊಂಡಿದ್ದಾರೆ. ಪೊಲೀಸರು ಕನಿಷ್ಠ 12 ರಿಂದ 13 ಕಿಮೀ ದೂರದಲ್ಲಿರುವ ಸಿಸಿಟಿವಿ ದೃಶ್ಯಗಳ ಮೂಲಕ ಅವರ ಬೈಕ್ ಅನ್ನು ಪತ್ತೆಹಚ್ಚಿದ್ದಾರೆ. ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ಶವವನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಾಣಿಸಿದೆ.ಆತನ ಹಿಂದೆಯೇ ಮಹಿಳೆಯೊಬ್ಬಳು ಹೆಜ್ಜೆ ಹಾಕುತ್ತಿರುವುದು ಕೂಡಾ ಕಾಣಿಸಿದೆ.

ಆರೋಪಿಯ ಸಹೋದರಿ ಪಾರುಲ್ ಆಕೆಯ ಸ್ಕಾರ್ಫ್‌ನಿಂದ ಶವವನ್ನು ಮರೆಮಾಚಲು ಇಬ್ಬರಿಗೆ ಸಹಾಯ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಏಪ್ರಿಲ್ 20 ರಂದು ಪಾರುಲ್ ತನ್ನ ಇಬ್ಬರು ಮಕ್ಕಳೊಂದಿಗೆ ತಾನು ವಾಸಿಸುತ್ತಿದ್ದ ಮನೆಯನ್ನು ಖಾಲಿ ಮಾಡಿದ್ದಾಳೆ. ಸಿಸಿಟಿವಿ ವಿಡಿಯೊಗಳ ಮೂಲಕ ತನಿಖಾ ತಂಡ ಆಕೆಯ ಚಲನವಲನವನ್ನು ಪತ್ತೆಹಚ್ಚಿದೆ. ಮಹಿಳೆ ಕುದುರೆ ಗಾಡಿಯನ್ನು ಬಾಡಿಗೆಗೆ ಪಡೆದಿದ್ದಳು, ಇದು ಲೋನಿ ಗಡಿಯ ಬಳಿ ಪತ್ತೆಯಾಗಿದೆ. ಇದು ಪೂರ್ವ ದೆಹಲಿಯಲ್ಲಿ ಅವಳನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು.

ಇದನ್ನೂ ಓದಿ: Tarikere: ಮರಕ್ಕೆ ಕಾರು ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು: ಮಕ್ಕಳಿಬ್ಬರಿಗೆ ಗಾಯ

ಈ ಕೃತ್ಯದಲ್ಲಿ ಪಾರೂಲ್ ಸಹಭಾಗಿಯಾಗರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೀತ್ ಮತ್ತು ಆತನ ಸ್ನೇಹಿತನನ್ನು ಬಂಧಿಸಲು ಶೋಧ ನಡೆಯುತ್ತಿದೆ.

ಪೊಲೀಸರ ಪ್ರಕಾರ, ವಿನೀತ್ ಮತ್ತು ಅವನ ತಂದೆ 2019 ರಲ್ಲಿ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದರು. ಆರೋಪಿ ಕಳೆದ ವರ್ಷ ನವೆಂಬರ್‌ನಿಂದ ಜಾಮೀನಿನ ಮೇಲೆ ಹೊರಗಿದ್ದ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Fri, 21 April 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!