AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಳುತ್ತಿದ್ದಾರೆಂದು ಸ್ವಂತ ಮಕ್ಕಳನ್ನೇ ಕೊಂದಳು ಪಾಪಿ..!

ಇದೀಗ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

Crime News: ಅಳುತ್ತಿದ್ದಾರೆಂದು ಸ್ವಂತ ಮಕ್ಕಳನ್ನೇ ಕೊಂದಳು ಪಾಪಿ..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 04, 2022 | 6:14 PM

ತಾಯಿ ಕರುಣಾಮಯಿ…ಮಮತೆಯ ಪ್ರತಿರೂಪ…ಅಮ್ಮ ಅಂದರೆ ಆರೈಕೆ… ತಾಯಿಯ ಕುರಿತಾದ ಈ ಹಲವು ರೀತಿಯ ವರ್ಣನೆಗಳನ್ನು ನೀವು ಕೇಳಿರುತ್ತೀರಿ, ಇಲ್ಲ ಓದಿರುತ್ತೀರಿ. ಆದರೆ ಈ ಘಟನೆಯೂ ಇವೆಲ್ಲಕ್ಕೂ ತದ್ವಿರುದ್ಧ ಎಂಬುದೇ ಅಚ್ಚರಿ. ತಾನೇ ಹೊತ್ತು ಹೆತ್ತ ಮಕ್ಕಳನ್ನೇ ತಾಯಿಯೊಬ್ಬಳು ನಿಶ್ಕರುಣೆಯಿಂದ ಕೊಲ್ಲಲು ಸಾಧ್ಯವೇ? ಎಂಬ ಪ್ರಶ್ನೆಗೆ ಈ ಘಟನೆಯೇ ಉತ್ತರ. ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್​ ಜಿಲ್ಲೆಯ ಪಾಂಡುರ್ನಾ ಗ್ರಾಮದಲ್ಲಿ. ಕೆಲ ದಿನಗಳ ಹಿಂದೆ 30 ವರ್ಷದ ಧುರ್ಪಾದಾಬಾಯಿ ಗಣಪತ್ ನಿಮಲ್ವಾಡ್ ಎಂಬ ಮಹಿಳೆಯು ಮನೆಯಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ಇದ್ದರು.

ಈ ವೇಳೆ ತನ್ನ ನಾಲ್ಕು ತಿಂಗಳ ಮಗಳು ಅನಸೂಯ ನಿರಂತರವಾಗಿ ಅತ್ತಿದ್ದಾಳೆ. ಇದರಿಂದ ಕೋಪಗೊಂಡ ಧುರ್ಪಾದಾಬಾಯಿ ಪುಟ್ಟ ಪುಟಾಣಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಈ ಘಟನೆ ಮೇ 31 ರಂದು ನಡೆದರೆ, ಜೂನ್ 1 ರಂದು ತನ್ನ 2ನೇ ಮಗನನ್ನು ಕೊಂದಿದ್ದಾಳೆ. ಮಗ ದತ್ತ ಹಸಿವಿನಿಂದ ಅಳುತ್ತಿದ್ದ ಕಾರಣ, ಧುರ್ಪಾದಾಬಾಯಿ ಆತನನ್ನು ಕೂಡ ಕತ್ತು ಹಿಸುಕಿ ಕೊಲೆ ಮಾಡಿದ್ದಳು.

ಇದಾದ ಬಳಿಕ ಧುರ್ಪಾದಾಬಾಯಿ ಮುಖೇಡ್ ತಾಲೂಕಿನ ನಿವಾಸಿಗಳಾದ ತನ್ನ ತಾಯಿ ಕೊಂಡಬಾಯಿ ರಾಜೇಮೋದ್ ಮತ್ತು ಸಹೋದರ ಮಾಧವ್ ರಾಜೇಮೋದ್ ಅವರ ಸಹಾಯದಿಂದ ಹೊಲದಲ್ಲಿ ಮಕ್ಕಳ ದೇಹವನ್ನು ಸುಟ್ಟು ಹಾಕಿದ್ದಾಳೆ. ಮಕ್ಕಳನ್ನು ಕೊಂದಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರಿಗೆ ಊರವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
T20 World Cup: ಟಿ20 ವಿಶ್ವಕಪ್​ನಲ್ಲಿ 20 ತಂಡಗಳ ನಡುವೆ ಸೆಣಸಾಟ..!
Image
Railway Recruitment 2022: SSLC ಪಾಸಾದವರಿಗೆ ಸುರ್ವಣಾವಕಾಶ: ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಅದರಂತೆ ಧುರ್ಪಾದಾಬಾಯಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಇಬ್ಬರು ಮಕ್ಕಳನ್ನು ಅಳುತ್ತಿದ್ದ ಕಾರಣ ಕತ್ತು ಹಿಸುಕಿ ಕೊಂದಿರುವುದಾಗಿ ತಿಳಿಸಿದ್ದಾಳೆ. ಅಷ್ಟೇ ಅಲ್ಲದೆ ಮಕ್ಕಳನ್ನು ಸುಡಲು ತಾಯಿ ಹಾಗೂ ಸಹೋದರ ಸಾಥ್ ನೀಡಿರುವ ವಿಚಾರವನ್ನು ಕೂಡ ಬಾಯಿ ಬಿಟ್ಟಿದ್ದಾಳೆ. ಅದರಂತೆ ಇದೀಗ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಭೋಕರ್ ತಾಲೂಕಿನ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ