AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೌಕಿಯಲ್ಲಿದ್ದ ಪೊಲೀಸ್​​ ಸಿಬ್ಬಂದಿಯ ಬ್ಯಾಗ್​ ಕಳ್ಳತನ; ದಂಗಾದ ಮಹಿಳಾ ಅಧಿಕಾರಿ

ಬೆಂಗಳೂರು ನಗರದಲ್ಲಿ ಕಳ್ಳರು ತಮ್ಮ ಕೈ ಚಳವನ್ನು ಪೊಲೀಸರಿಗೆ ತೋರಿಸಿದ್ದಾರೆ. ನಗರದ ಅಭಿನಯ ಜಂಕ್ಷನ್​​ನಲ್ಲಿರುವ ಪೊಲೀಸ್​ ಚೌಕಿಯಲ್ಲಿ ಮಹಿಳಾ ಸಿಬ್ಬಂದಿ ತಮ್ಮ ಬ್ಯಾಗ್​ ಇಟ್ಟಿದ್ದರು. ಬಳಿಕ ಸಂಚಾರ ದಟ್ಟಣೆ ನಿಯಂತ್ರಿಸಲು ತಮ್ಮ ಬಾಡಿ ಕ್ಯಾಮೆರಾವನ್ನು ಬ್ಯಾಗ್​ನಲ್ಲಿಟ್ಟು ಸಿಬ್ಬಂದಿ ಹೊರಗೆ ಹೋದರು. ಮುಂದೇನಾಯ್ತು ಈ ಸ್ಟೋರಿ ಓದಿ....

ಚೌಕಿಯಲ್ಲಿದ್ದ ಪೊಲೀಸ್​​ ಸಿಬ್ಬಂದಿಯ ಬ್ಯಾಗ್​ ಕಳ್ಳತನ; ದಂಗಾದ ಮಹಿಳಾ ಅಧಿಕಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 04, 2023 | 9:03 AM

ಬೆಂಗಳೂರು ಡಿ.04: ಈ ಪ್ರಕರಣದಲ್ಲಿ ಚಾಲಾಕಿ ಖದೀಮರು ತಮ್ಮ ಕೈ ಚಳಕವನ್ನು ಪೊಲೀಸರಿಗೆ (Police) ತೋರಿಸಿದ್ದಾರೆ. ನಗರದ ಅಭಿನಯ ಜಂಕ್ಷನ್​​ನಲ್ಲಿರುವ​ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್​ ಅನ್ನು ಕಳ್ಳರು (Thieves) ಕದ್ದು ಪರಾರಿಯಾಗಿದ್ದಾರೆ. ನವೆಂಬರ್​ 22 ರಂದು ಕೆಆರ್ ಮಾರ್ಕೆಟ್ (KR Market) ಸಂಚಾರಿ ಪೊಲೀಸ್​ ಠಾಣೆಯ ಮಹಿಳಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇವರು ಪೊಲೀಸ್ ಚೌಕಿಯೊಳಗೆ ಬಂದು ಬ್ಯಾಗ್​ನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಕೊಟ್ಟಿದ್ದ ಬಾಡಿ ವೊರ್ನ್ ಕ್ಯಾಮೆರಾವನ್ನು ಇಟ್ಟಿದ್ದರು.

ಬಳಿಕ ಸಂಚಾರ ದಟ್ಟಣೆ ನಿಯಂತ್ರಿಸಲು ಚೌಕಿಯಿಂದ ಹೊರಗೆ ಹೋಗಿದ್ದಾರೆ. ಇದನ್ನು ಗಮನಿಸಿದ ಖದೀಮರು ಮಹಿಳಾ ಪೊಲೀಸ್​ ಸಿಬ್ಬಂದಿಯ ಬ್ಯಾಗ್ ಕದ್ದು ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಮಹಿಳಾ ಪೊಲೀಸ್​ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೆ ತಿಂಗಳಿನಲ್ಲಿ ಏಳು ಶಾಲೆಗಳಲ್ಲಿ ಕಳ್ಳತನ

ಹಾವೇರಿ: ಒಂದೇ ತಿಂಗಳಲ್ಲಿ ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಭಾಗದ ಏಳು ಶಾಲೆಗಳಲ್ಲಿ ಕಳ್ಳತನವಾಗಿದೆ. ಏಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಡುಗೆ ಕೋಣೆಗಳಲ್ಲಿನ ಸಾಮಾಗ್ರಿಗಳನ್ನು ಕಳ್ಳರು ಕದ್ದಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಣೆಬೆನ್ನೂರ ತಾಲುಕಿನ ಹರನಗಿರಿ, ಮೈದೂರ, ಮಾಕನೂರ ಪ್ರೌಢಶಾಲೆ, ಕೋಟಿಹಾಳ, ಗಂಗಾಪುರ ಪ್ರಾಥಮಿಕ ಶಾಲೆಗಳಲ್ಲಿನ ಅಕ್ಕಿ, ಬೇಳೆ, ಎಣ್ಣೆ, ಹಾಲಿನ ಪೌಡರ್ ಚೀಲಗಳು ಕಳ್ಳತನವಾಗಿವೆ. ರಾಣೆಬೆನ್ನೂರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ

ಮುಖಕ್ಕೆ ಬೂದಿ ಎರಚಿ‌ ಚಿನ್ನ & ನಗದು ಕಳ್ಳತನ

ಕೊಡಗು: ಕುಶಾಲನಗರ ತಾಲ್ಲೂಕಿನ ಗುಡ್ಡಹೊಸೂರು ಗ್ರಾಮದ ಪಿಎಂ ಇಸ್ಮಾಯಿಲ್ ಎಂಬುವರ ಮನೆಯಲ್ಲಿದ್ದ 45 ಗ್ರಾಂ ಚಿನ್ನವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ರವಿವಾರ ಮಧ್ಯರಾತ್ರಿ 2 ಗಂಟೆಗೆ ಮುಸುಕುಧಾರಿಗಳು ಪಿಎಂ ಇಸ್ಮಾಯಿಲ್ ಅವರ ಮನೆ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಕಳ್ಳರು ಮುಖಕ್ಕೆ ಬೂದಿ ಎರಚಿದ್ದಾರೆ. ಬೂದಿ ಎರಚುತ್ತಿದ್ದಂತೆ ಮನೆಯವರು ಪ್ರಜ್ಞೆ ತಪ್ಪಿದ್ದಾರೆ.

ನಂತರ ಮನೆಯೊಳಗೆ ಹೋಗಿ 45 ಗ್ರಾಂ ಚಿನ್ನ ಮತ್ತು ಐದು ಸಾವಿರ ರೂ. ನಗದು ದೊಚಿ ಪರಾರಿಯಾಗಿದ್ದಾರೆ. ಇದಕ್ಕೂ ಮೊದಲು ಮತ್ತೊಂದು ಮನೆಯಲ್ಲಿ ಕಳ್ಳತನಾ ಮಾಡಲು ಯತ್ನಿಸಿದ್ದರು. ಆದರೆ ಅದು ವಿಫಲವಾಗಿದೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 am, Mon, 4 December 23

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?