AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstruation: ರಿಯಾದ್‌ನಿಂದ ವಿಮಾನದಲ್ಲಿ ಬಂದ ಕೇರಳದ ಮಹಿಳೆ ಚಿನ್ನ ಅಡಗಿಸಿಟ್ಟುಕೊಂಡು ಕಳ್ಳಸಾಗಣೆ ಮಾಡಿದ್ದು ಹೇಗೆ ಗೊತ್ತಾ!?

ಚಿನ್ನ ಕಳ್ಳಸಾಗಣೆ ಬಗ್ಗೆ ನಿತ್ಯವೂ ಸುದ್ದಿ ನೋಡುತ್ತಿರುತ್ತೇವೆ. ವಿದೇಶದಿಂದ ಅದರಲ್ಲೂ ಅರಬ್ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಭಾರತದ ಯಾವುದಾದರೂ ವಿಮಾನ ನಿಲ್ದಾಣಕ್ಕೆ ಬಂದು ತಗಲಾಕಿಕೊಳ್ಳುತ್ತಾರೆ. ಕಳ್ಳಸಾಗಣೆದಾರರು ಆಯ್ಕೆ ಮಾಡಿಕೊಳ್ಳುವ ಮಾರ್ಗಗಳು ನಿಜಕ್ಕೂ ಒಮ್ಮೊಮ್ಮೆ ಕುತೂಹಲಕಾರಿಯಾಗಿರುತ್ತದೆ.

Menstruation: ರಿಯಾದ್‌ನಿಂದ ವಿಮಾನದಲ್ಲಿ ಬಂದ ಕೇರಳದ ಮಹಿಳೆ ಚಿನ್ನ ಅಡಗಿಸಿಟ್ಟುಕೊಂಡು ಕಳ್ಳಸಾಗಣೆ ಮಾಡಿದ್ದು ಹೇಗೆ ಗೊತ್ತಾ!?
ಕೇರಳದ ಮಹಿಳೆ ಸ್ಯಾನಿಟರಿ ನ್ಯಾಪ್ಕಿನ್​ನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಕಳ್ಳಸಾಗಣೆ ಮಾಡಿದರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Feb 10, 2023 | 6:23 AM

ಚಿನ್ನ ಕಳ್ಳಸಾಗಣೆ (Gold Smuggling) ಬಗ್ಗೆ ನಿತ್ಯವೂ ಸುದ್ದಿ ನೋಡುತ್ತಿರುತ್ತೇವೆ. ವಿದೇಶದಿಂದ ಅದರಲ್ಲೂ ದುಬೈ, ರಿಯಾದ್‌ (Riyadh) ಅಂತಹ ಅರಬ್ ರಾಷ್ಟ್ರಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಭಾರತದ ಯಾವುದಾದರೂ ವಿಮಾನ ನಿಲ್ದಾಣಕ್ಕೆ ಬಂದು ತಗಲಾಕಿಕೊಳ್ಳುತ್ತಾರೆ. ಕಳ್ಳಸಾಗಾಣಿಕೆಗಾಗಿ ಕಳ್ಳಸಾಗಣೆದಾರರು ಆಯ್ಕೆ ಮಾಡಿಕೊಳ್ಳುವ ಮಾರ್ಗಗಳು ನಿಜಕ್ಕೂ ಒಮ್ಮೊಮ್ಮೆ ಕುತೂಹಲಕಾರಿಯಾಗಿರುತ್ತದೆ. ಅಧಿಕಾರಿಗಳು ಎಷ್ಟೇ ಕ್ರಮ ಕೈಗೊಂಡರೂ ಚಿನ್ನದ ಮೇಲಿನ ವ್ಯಾಮೋಹವೋ ಏನೋ, ಅಕ್ರಮವಂತೂ ನಿಂತಿಲ್ಲ. ಕಳ್ಳಸಾಗಣೆದಾರರು ತಮ್ಮ ಸಾಹಸ ಜಾರಿಯಲ್ಲಿಟ್ಟಿರುತ್ತಾರೆ. ಇತ್ತೀಚಿಗೆ ಕೇರಳದ ಮಹಿಳೆಯೊಬ್ಬರು (Kerala Woman) ಮಾಡಿದ್ದೇನು ಅಂತ ಗೊತ್ತಾದ್ರೆ ಸ್ವಲ್ಪ ಶಾಕ್ ಆಗುವುದು ಗ್ಯಾರಂಟಿ.

ವಿಷಯ ಏನೆಂದರೆ… ರಿಯಾದ್ ನಿಂದ ಮಹಿಳೆಯೊಬ್ಬರು ಕೊಚ್ಚಿಯ ನೆಡುಂಬಸ್ಸೆರಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಿಂದ ಹೊರಡುವಾಗ ಗ್ರೀನ್ ಚಾನೆಲ್ ಮೂಲಕ ಹಾದುಹೋಗಲು ಪ್ರಯತ್ನಿಸಿದಾಗ, ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ಆಕೆಯನ್ನು ಪ್ರಶ್ನಿಸಿದರು. ದೈಹಿಕ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳು ಕೇಳಿದ್ದಾರೆ.

ಆಕೆ ತಾನು ಋತುಮತಿ ಸ್ಥಿತಿಯಲ್ಲಿರುವುದರಿಂದ (Menstruation) ದೈಹಿಕ ಪರೀಕ್ಷೆಗೆ ಸಹಕರಿಸುವುದಿಲ್ಲ ಎಂದು ಉತ್ತರಿಸಿದ್ದಾರೆ. ಆದರೆ ಮಹಿಳಾ ಅಧಿಕಾರಿಗಳು ಆಕೆಯ ಮಾತನ್ನು ನಂಬಿಲ್ಲ. ಪರೀಕ್ಷೆಯಲ್ಲಿ.. ಮಹಿಳೆಯ ಖಾಸಗಿ ಭಾಗದಲ್ಲಿ ಐದು ಚಿನ್ನದ ಬಿಸ್ಕತ್ತುಗಳನ್ನು ತುರುಕಿಕೊಂಡಿರುವುದು ಪತ್ತೆಯಾಗಿದೆ. ಅಲ್ಲಿ ಅಡಗಿಸಿಟ್ಟುಕೊಂಡಿದ್ದ ಚಿನ್ನದ ಬೆಲೆ ಸುಮಾರು ರೂ. 30 ಲಕ್ಷ.

ಇನ್ನೂ ಆಘಾತಕಾರಿ ಸಂಗತಿಯೆಂದರೆ ಅಧಿಕಾರಿಗಳನ್ನು ಮೂರ್ಖರನ್ನಾಗಿಸಲು ಆ ಮಹಿಳೆ ಕೃತಕವಾಗಿ, ತಾನು ಋತುಚಕ್ರ ಅವಸ್ಥೆಯಲ್ಲಿರುವುದಾಗಿ ಸಾಬೀತುಪಡಿಸಲು ಪ್ರಯತ್ನಿಸಿದ್ದಳು ಎಂಬುದು ತನಿಖೆ ವೇಳೆ ಬಟಾಬಯಲಾಗಿದೆ. ಸ್ಯಾನಿಟರಿ ನ್ಯಾಪ್ಕಿನ್‌ನಲ್ಲಿ (Sanitary Napkin) ಚಿನ್ನವನ್ನು ಬಚ್ಚಿಟ್ಟು, ನ್ಯಾಪ್ಕಿನ್‌ಗೆ ಕೆಂಪು ಬಣ್ಣ ಬಳಿದು ಋತುಸ್ರಾವದ ಭಾವನೆ ಮೂಡಿಸಿದ್ದಾಳೆ! ಈ ವಿಷಯ ತಿಳಿದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಆದರೆ ಪಟ್ಟುಬಿಡದೆ ಆಕೆಯ ಅಕ್ರಮವನ್ನು ಬಟಾಬಯಲು ಮಾಡಿದ್ದಾರೆ.

ಚಿನ್ನ ಕಳ್ಳಸಾಗಣೆ ರಹದಾರಿಗಳು ನೂರೆಂಟು ಎಂಬುದು ಕಸ್ಟಮ್ಸ್​ ಅಧಿಕಾರಿಗಳಿಗೆ ಆಗಾಗ ಮನದಟ್ಟಾಗುತ್ತಿದ್ದು, ತಮ್ಮ ಕಣ್ಗಾವಲನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಇಷ್ಟೆಲ್ಲಾ ಕಡಿವಾಣ ಹಾಕಿದರೂ ಕಳ್ಳಸಾಗಣೆದಾರರು ರಂಗೋಲಿ ಹಾಕುತ್ತಾರಲ್ಲಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್