Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣ, ಸಾಮೂಹಿಕ ಅತ್ಯಾಚಾರ, ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಮಹಿಳೆಯನ್ನು ಎಸೆದು ಹೋದ ಆರೋಪಿಗಳು

ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಎಸೆದು ಹೋದ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು ಇತ್ತು, ಬಟ್ಟೆ ಇರಲಿಲ್ಲ, ಸಹಾಯಕ್ಕಾಗಿ ಜನರಲ್ಲಿ ಅಂಗಲಾಚುತ್ತಿದ್ದಳು. ಬಳಿಕ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯ ಹೇಳಿಕೆ ಪಡೆದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಪಹರಣ, ಸಾಮೂಹಿಕ ಅತ್ಯಾಚಾರ, ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಮಹಿಳೆಯನ್ನು ಎಸೆದು ಹೋದ ಆರೋಪಿಗಳು
Image Credit source: Mint
Follow us
ನಯನಾ ರಾಜೀವ್
|

Updated on: Sep 10, 2023 | 11:08 AM

ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಎಸೆದು ಹೋದ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು ಇತ್ತು, ಬಟ್ಟೆ ಇರಲಿಲ್ಲ, ಸಹಾಯಕ್ಕಾಗಿ ಜನರಲ್ಲಿ ಅಂಗಲಾಚುತ್ತಿದ್ದಳು. ಬಳಿಕ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯ ಹೇಳಿಕೆ ಪಡೆದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಶನಿವಾರ ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಮಹಿಳೆಯನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರವೆಸಗಿ ಮೈತುಂಬಾ ಗಾಯಗಳನ್ನು ಮಾಡಿದ್ದಾರೆ. ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಮಹಿಳೆ ಜನರಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದಳು, ಯಾರೂ ಕೂಡ ಆಕೆಗೆ ಸಹಾಯ ಮಾಡಲಿಲ್ಲ, ಯಾರೋ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮತ್ತಷ್ಟು ಓದಿ: ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಇಬ್ಬರು ಆರೋಪಿಗಳಲ್ಲಿ ಒಬ್ಬರು ಮಹಿಳೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಎಂದು ಗಂಗಾಪುರ ಪೊಲೀಸ್ ಠಾಣೆಯ ಎಸ್​ಎಚ್​ಒ ನರೇಂದ್ರ ಜೈನ್ ತಿಳಿಸಿದ್ದಾರೆ. ಇದಾದ ಬಳಿಕ ಮಹಿಳೆಯನ್ನು ಅಮ್ಲಿ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಆಗಸ್ಟ್ 4ರಂದು ರಾಜಸ್ಥಾನದ ಬಿಲ್ವಾರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಆಕೆಯನ್ನು ಸಜೀವವಾಗಿ ದಹಿಸಿದ್ದರು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಸಿಕ್ಕಿಬೀಳುವ ಭಯದಿಂದ ಯುವಕರು ಗ್ರಾಮದ ಹೊರಗೆ ಇಟ್ಟಿಗೆ ಗೂಡೊಂದರಲ್ಲಿ ಆಕೆಯನ್ನು ಸುಟ್ಟು ಹಾಕಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ