AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Accident: ಕಾರಿಗೆ ಸಿಲುಕಿಕೊಂಡಿದ್ದ ಯುವತಿ ಮೃತದೇಹ ಬೇರ್ಪಡಿಸಲು ಅಂದು ಯುವಕರು ಮಾಡಿದ್ದೇನು?

ಕಾರಿನಡಿ ಸಿಲುಕಿ ಯುವತಿ ಸಾವನ್ನಪ್ಪಿದ ಪ್ರಕರಣದ ಕುರಿತು ಆರೋಪಿಗಳು ಕೆಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಯುವತಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಳಿಕ ಆಕೆಯ ದೇಹ ಕಾರಿಗೆ ಸಿಲುಕಿಕೊಂಡಿತ್ತು

Delhi Accident: ಕಾರಿಗೆ ಸಿಲುಕಿಕೊಂಡಿದ್ದ ಯುವತಿ ಮೃತದೇಹ ಬೇರ್ಪಡಿಸಲು ಅಂದು ಯುವಕರು ಮಾಡಿದ್ದೇನು?
ಕಾರು
TV9 Web
| Edited By: |

Updated on:Jan 09, 2023 | 10:06 AM

Share

ಕಾರಿನಡಿ ಸಿಲುಕಿ ಯುವತಿ ಸಾವನ್ನಪ್ಪಿದ ಪ್ರಕರಣದ ಕುರಿತು ಆರೋಪಿಗಳು ಕೆಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಕಾರು ಯುವತಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಳಿಕ ಆಕೆಯ ದೇಹ ಕಾರಿಗೆ ಸಿಲುಕಿಕೊಂಡಿತ್ತು, ಕಾರಿನಿಂದ ದೇಹವನ್ನು ಬೇರ್ಪಡಿಸಲು ಕಾರನ್ನು ವೇಗವಾಗಿ ಚಲಾಯಿಸಿದ್ದಲ್ಲದೆ ಆಗಾಗ ಯು ಟರ್ನ್​ ತೆಗೆದುಕೊಳ್ಳುತ್ತಿದ್ದೆವು ಎಂದು ಹೇಳಿದ್ದಾರೆ.

ಈ ಮೊದಲು ತಾವು ಕುದಿದ್ದೆವು ಅಪಘಾತವಾಗಿರುವ ಕುರಿತು ತಮಗೆ ಗೊತ್ತೇ ಆಗಲಿಲ್ಲ ಎಂದು ಹೇಳಿದ್ದರು, ಆದರೆ ಈಗ ಅಪಘಾತ ನಡೆದಿದ್ದು ಗೊತ್ತಿತ್ತು, ದೇಹ ಕಾರಿಗೆ ಸಿಲುಕಿದ್ದರಿಂದ ಭಯದಿಂದಲೇ ಕಾರು ಚಲಾಯಿಸುತ್ತಿದ್ದೆವು, ಆಗಾಗ ಯು ಟರ್ನ್​ ತೆಗೆದುಕೊಳ್ಳುತ್ತಿದ್ದೆವು ಎಂದು ಹೇಳಿದ್ದಾರೆ.

ಆರೋಪಿಗಳು ತಪ್ಪೆಸಗಿರುವುದಾಗಿ ಬಾಯ್ಬಿಟ್ಟಿದ್ದಾರೆ. ಆಕೆ ಕಾರಿನಡಿ ಸಿಲುಕಿದ್ದು ಮೊದಲು ತಮಗೆ ಗೊತ್ತಿರಲಿಲ್ಲ. ಭಯದಲ್ಲಿ ಕಾರು ಓಡಿಸಿಕೊಂಡು 13 ಕಿಮೀ ದೂರ ಹೋದ ಬಳಿಕ ಪರಿಶೀಲಿದಾಗ ದೇಹ ಸಿಲುಕಿದ್ದು ನೋಡಿದೆವು ಎಂದಿದ್ದಾರೆ. ಪೊಲೀಸ್​ ಎಫ್​ಐಆರ್​​ನಲ್ಲಿ ಈ ಹೇಳಿಕೆ ದಾಖಲಿಸಿದ್ದರು.

ಮತ್ತಷ್ಟು ಓದಿ:  ದೆಹಲಿಯ ಯುವತಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು; ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ದಾಖಲು

20 ವರ್ಷದ ಅಂಜಲಿ ಸಿಂಗ್ ತನ್ನ ಸ್ಕೂಟರ್‌ನಲ್ಲಿ ಸ್ನೇಹಿತನೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ರಾತ್ರಿ 2 ಗಂಟೆಯ ಸಮಯದಲ್ಲಿ ಕಾರು ಡಿಕ್ಕಿ ಹೊಡೆದಿದೆ. ಆಕೆಯ ಕಾಲು ಕಾರಿನ ಮುಂಭಾಗದ ಚಕ್ರಕ್ಕೆ ಸಿಕ್ಕಿಹಾಕಿಕೊಂಡಿತು, ಮತ್ತು ಆಕೆಯ ದೇಹವನ್ನು ಕಾರು ಎಳೆದೊಯ್ದಿತ್ತು. ಆಕೆಯ ಸ್ನೇಹಿತ ಇನ್ನೊಂದು ಬದಿಯಲ್ಲಿ ಬಿದ್ದು ಸಣ್ಣಪುಟ್ಟ ಗಾಯಗಳಾಗಿತ್ತು.

ಮೃತದೇಹದೊಂದಿಗೆ ಸಿಕ್ಕಿಕೊಂಡರೆ ಜೈಲು ಗ್ಯಾರಂಟಿ ಎನ್ನುವ ಭಯದಲ್ಲಿ ಕಾರಿನಿಂದ ದೇಹವನ್ನು ಬೇರ್ಪಡಿಸುವ ಯೋಚನೆ ಮಾಡಿ, ಕಾರು ಚಲಿಸುತ್ತಿದ್ದಂತೆಯೇ ವೇಗವಾಗಿ ಕಾರನ್ನು ಯು ಟರ್ನ್ ತೆಗೆದುಕೊಂಡು ಮೃತದೇಹವನ್ನು ಕಾರಿನಿಂದ ಬೇರ್ಪಡಿಸುವ ಸಾಹಸ ಮಾಡಿದ್ದರು. ಕಾರು ಚಲಾಯಿಸುತ್ತಿದ್ದ ಅಮಿತ್ ಖನ್ನಾ ಅವರ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿರುವುದರಿಂದ ಅವರು ಮತ್ತಷ್ಟು ಭಯಪಟ್ಟಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:05 am, Mon, 9 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್