AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಾನಸಿಕ ಅಸ್ವಸ್ಥ ಮಗನನ್ನು ಚಂಬಲ್ ನದಿಗೆ ಎಸೆದ ತಾಯಿಯ ಬಂಧನ

ನಾಲ್ಕು ವರ್ಷದ ಮಾನಸಿಕ ಅಸ್ವಸ್ಥ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ 26 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ನಿವಾಸಿ ದಿಲ್ ಅಫ್ರೋಜ್ ದಾದಾಬರಿ ಪ್ರದೇಶದ ಚಂಬಲ್ ನದಿಗೆ ತನ್ನ ಮಗನನ್ನು ಎಸೆದಿದ್ದಳು.

Crime News: ಮಾನಸಿಕ ಅಸ್ವಸ್ಥ ಮಗನನ್ನು ಚಂಬಲ್ ನದಿಗೆ ಎಸೆದ ತಾಯಿಯ ಬಂಧನ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on:Mar 04, 2023 | 8:59 AM

Share

ನಾಲ್ಕು ವರ್ಷದ ಮಾನಸಿಕ ಅಸ್ವಸ್ಥ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ 26 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ನಿವಾಸಿ ದಿಲ್ ಅಫ್ರೋಜ್ ದಾದಾಬರಿ ಪ್ರದೇಶದ ಚಂಬಲ್ ನದಿಗೆ ತನ್ನ ಮಗನನ್ನು ಎಸೆದಿದ್ದಳು.

ಬಾಲಕನಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ, ದೈಹಿಕವಾಗಿ ದುರ್ಬಲನಾಗಿದ್ದ ಹೀಗಾಗಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಅಫ್ರೋಜ್ ತನ್ನ ಆರು ವರ್ಷದ ಮಗಳು ಮತ್ತು ಮಗನೊಂದಿಗೆ ಬರಾನ್ ಜಿಲ್ಲೆಯ ಮ್ಯಾಂಗ್ರೋಲ್‌ನಿಂದ ಬಸ್‌ನಲ್ಲಿ 90 ಕಿಲೋಮೀಟರ್ ಪ್ರಯಾಣಿಸಿದ್ದಳು. ಸೋಮವಾರ ಪತಿಯೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮನೆಯವರು ಮಾಂಗ್ರೋಲ್‌ಗೆ ಬಂದಿದ್ದರು. ಬೆಳಗ್ಗೆ ಕೋಟಾ ತಲುಪಿದ್ದಾರೆ.

ಅಫ್ರೋಜ್ ದಾದಾಬರಿಯ ಚಂಬಲ್ ದಡದಲ್ಲಿರುವ ಅಧರ್ಶೀಲಾಗೆ ಆಟೋರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದಳು ಹಾಗೂ ಸ್ಥಳೀಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ತನ್ನ ಮಗನನ್ನು ನದಿಗೆ ಎಸೆದು ಬಂದಿದ್ದಳು, ಬಳಿಕ ಬಾಲಕನ ಶವ ನದಿಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬುಧವಾರ ಆರೋಪಿ ಮಹಿಳೆ ಹಾಗೂ ಟೈಲರಿಂಗ್ ಅಂಗಡಿ ನಡೆಸುತ್ತಿರುವ ಆಕೆಯ ಪತಿಯನ್ನು ವಿಚಾರಣೆ ನಡೆಸಿದ ಬಳಿಕ ಬಾಲಕನ ಗುರುತು ಪತ್ತೆಯಾಗಿದೆ.

ಮತ್ತಷ್ಟು ಓದಿ:ಓಡಿ ಹೋದ ಪ್ರೇಮಿಗಳ ಕುಟುಂಬದ ನಡುವೆ ಗಲಾಟೆ; ನ್ಯಾಯ ಪಂಚಾಯ್ತಿ ಮಾಡಲು ಹೋಗಿ ಕೊಲೆಯಾದ

ಅಫ್ರೋಜ್‌ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗಿ ಏಳು ವರ್ಷಗಳಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sat, 4 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ