Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ

ಬೆಂಗಳೂರಿನ ಸರ್ಜಾಪುರದಲ್ಲಿ 35 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಸ್ಥಳೀಯರು ಗ್ರಾಮ ಪಂಚಾಯತಿಗೆ ದೂರು ನೀಡಿದ್ದರು. ಚರಂಡಿ ಸ್ವಚ್ಛಗೊಳಿಸುವಾಗ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಚರಂಡಿಗೆ ಎಸೆದಿರಬಹುದಾಗಿ ಶಂಕಿಸಲಾಗಿದೆ.

ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ
ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2024 | 7:30 PM

ಆನೇಕಲ್‌, ನವೆಂಬರ್​ 14: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ (Woman) ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಬೇರೆಲ್ಲೂ ಕೊಲೆ ಮಾಡಿ ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶ್ವಾನದಳದಿಂದ ಪರಿಶೀಲನೆ ಮಾಡಲಾಗಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ದಿನಗಳಿಂದ ಏರಿಯಾದಲ್ಲಿ ಕೆಟ್ಟ ವಾಸನೆ ಬರುತ್ತಿತ್ತು. ಹೀಗಾಗಿ ಇಲಿ ಸತ್ತಿರಬಹುದೆಂದು ಊಹಿಸಿ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿಗೆ ದೂರು ನೀಡಿದ್ದಾರೆ. ಪೌರ ಕಾರ್ಮಿಕರಿಂದ ಚರಂಡಿ ಸ್ವಚ್ಚತೆ ಮಾಡುವ ವೇಳೆ ಮೊದಲು ಕಾಲು ಕಾಣಿಸಿದ್ದು, ಪರಿಶೀಲನೆ ನಡೆಸಿದಾಗ ಕೊಳೆತ ಶವ ಪತ್ತೆ ಆಗಿದೆ.

ಇದನ್ನೂ ಓದಿ: ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು

ದುಷ್ಕರ್ಮಿಗಳು ವೈರ್‌ನಿಂದ ಕೈಕಾಲು ಕಟ್ಟಿ ಮಹಿಳೆಯನ್ನು ಕೊಲೆಗೈದು ಬಳಿಕ ಶವ ಚರಂಡಿಗೆ ಎಸೆದು ಹೋಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ: ಕೌಟುಂಬಿಕ ಕಲಹ ಶಂಕೆ

ಕೊಡಗು: ಇಂಜಿಲ್‌ಗೆರೆಯಲ್ಲಿ ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಇಂಜಿಲ್‌ಗೆರೆ ಗ್ರಾಮದಲ್ಲಿ ನಡೆದಿದೆ. ತಸ್ಕಿ(35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಕೌಟುಂಬಿಕ ಕಲಹದಿಂದ ಶಫೀಕ್ ಪತ್ನಿ ತಸ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ಬಂದೋಬ್ತಸ್​ಗೆ ತೆರಳಿದ್ದ ಪೊಲೀಸ್​ ಕಾನ್​​ಸ್ಟೇಬಲ್: ಬೆಳಗಾಗುವುದರಲ್ಲಿ ಸಾವು

ರಾಮನಗರ: ನಿನ್ನೆ ಚನ್ನಪಟ್ಟಣ ಉಪ ಚುನಾವಣೆ ಬಂದೋಬ್ತಸ್​ಗೆ ತೆರಳಿದ್ದ ಪೊಲೀಸ್​ ಕಾನ್​​ಸ್ಟೇಬಲ್ ಸಾವನ್ನಪ್ಪಿರುವಂತಹ ಘಟನೆ ರಾಮನಗರದ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ಗುರುಲಿಂಗಪ್ಪ(32)‌ ಮೃತ ಪೊಲೀಸ್​ ಕಾನ್​​ಸ್ಟೇಬಲ್.

ಇದನ್ನೂ ಓದಿ: ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಗುರುಲಿಂಗಪ್ಪ, ಚನ್ನಪಟ್ಟಣ ಉಪ ಚುನಾವಣೆ ಬಂದೋಬಸ್ತ್​ನಿಂದ ರಾತ್ರಿ ಮನೆಗೆ ವಾಪಾಸ್ ಆಗಿದ್ದರು. ಆದರೆ ವಿಧಿಯಾಟ ಬೆಳಗಾಗುವುದರಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿವೈ ಎಸ್​ಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ