AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ನಡೆದಿದೆ. ರಾಮನಗರ ಜಿಲ್ಲೆಯಲ್ಲಿ ರೌಡಿಶೀಟರ್​ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಅದೇ ರೀತಿ, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಭೀಮೇಶ್​​ ಪೂಜಾರ್
| Updated By: Rakesh Nayak Manchi|

Updated on:Oct 15, 2023 | 10:55 AM

Share

ರಾಯಚೂರು, ಅ.15: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್​ಎಸ್​ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಕೊಲೆ

ರಾಮನಗರ: ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನನ್ನು ಕೊಲೆ ಮಾಡಿದ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್ (34)​ ಹತ್ಯೆಯಾದ ರೌಡಿಶೀಟರ್. ರಾಮನಗರ ಗ್ರಾಮಾಂತರ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಸ್ಥಳಕ್ಕೆ ಎಸ್​ಪಿ ಕಾರ್ತಿಕ್ ರೆಡ್ಡಿ, ಎಎಸ್‌ಪಿ ಸುರೇಶ್ ಭೇಟಿನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಕೀಲ್ ಅಖ್ತರ್ (28) ಕೊಲೆಯಾದ ಯುವಕ. ಕೋಗಿಲು ಲೇಔಟ್​ನಲ್ಲಿ ಶಕೀಲ್​ನನ್ನು ಕೊಲೆ ಮಾಡಿ ಸೈಟ್​ನ ಪಿಟ್ ಗುಂಡಿಗೆ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 am, Sun, 15 October 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್