AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ನಾಪತ್ತೆಯಾಗಿ ಕೆಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ದೇಹ ಪತ್ತೆ

ಕೇರಳದ ಕರುನಾಗಪಲ್ಲಿಯಿಂದ ನಾಪತ್ತೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವವನ್ನು ಮಂಗಳವಾರ ಗುಂಡಿಯಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಎಂದು ಗುರುತಿಸಲಾಗಿರುವ ಮಹಿಳೆಯ ಶವವನ್ನು ಆಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್ ಎಂಬ 50 ವರ್ಷದ ವ್ಯಕ್ತಿಯ ಮನೆಯ ಸಮೀಪದಿಂದ ವಶಪಡಿಸಿಕೊಳ್ಳಲಾಗಿದೆ. ಕೊಲೆ ಆರೋಪದ ಮೇಲೆ ಜಯಚಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ: ನಾಪತ್ತೆಯಾಗಿ ಕೆಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ದೇಹ ಪತ್ತೆ
ಅಪರಾಧImage Credit source: India Today
ನಯನಾ ರಾಜೀವ್
|

Updated on: Nov 21, 2024 | 8:49 AM

Share

ಕೇರಳದ ಕರುನಾಗಪಲ್ಲಿಯಿಂದ ನಾಪತ್ತೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವವನ್ನು ಮಂಗಳವಾರ ಗುಂಡಿಯಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಎಂದು ಗುರುತಿಸಲಾಗಿರುವ ಮಹಿಳೆಯ ಶವವನ್ನು ಆಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್ ಎಂಬ 50 ವರ್ಷದ ವ್ಯಕ್ತಿಯ ಮನೆಯ ಸಮೀಪದಿಂದ ವಶಪಡಿಸಿಕೊಳ್ಳಲಾಗಿದೆ. ಕೊಲೆ ಆರೋಪದ ಮೇಲೆ ಜಯಚಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಲಕ್ಷ್ಮಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧವಿದೆ ಎಂಬ ಶಂಕೆಯಿಂದ ಜಯಚಂದ್ರ ಆಕೆಯನ್ನು ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆಯ ಬಳಿಕ ಶವವನ್ನು ಮನೆಯಲ್ಲೇ ಇರಿಸಿಕೊಂಡಿದ್ದ, ಅಕ್ಕಪಕ್ಕದ ಮನೆಯವರು ಹಬ್ಬಕ್ಕೆಂದು ದೇವಸ್ಥಾನಗಳಿಗೆ ಹೋದ ಸಮಯವನ್ನು ಬಳಸಿಕೊಂಡು ಆಕೆಯ ಚಿನ್ನಾಭರಣಗಳನ್ನು ತೆಗೆದು ಆಕೆಯ ದೇಹವನ್ನು ತನ್ನ ಜಮೀನಿನಲ್ಲಿ ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಜಯಚಂದ್ರ ರಾಜ್ಯ ಸಾರಿಗೆ ಬಸ್‌ನಲ್ಲಿ ಆಕೆಯ ಫೋನ್ ಅನ್ನು ಎಸೆದಿದ್ದ, ಬಸ್ ಕಂಡಕ್ಟರ್ ಸ್ವಿಚ್ ಆಫ್ ಆಗಿದ್ದ ಸೆಲ್ ಫೋನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಫೋನ್‌ನ ಟವರ್ ಲೊಕೇಶನ್ ಮತ್ತು ಕರೆ ದಾಖಲೆಗಳನ್ನು ಗಮನಿಸಿದ ನಂತರ ಆತ ತಪ್ಪೊಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ಜಯಚಂದ್ರ ನವೆಂಬರ್ 6 ರಂದು ವಿಜಯಲಕ್ಷ್ಮಿ ಜತೆ ವಾಗ್ವಾದ ಮಾಡಿದ್ದ, ಅದು ತಾರಕಕ್ಕೇರಿ ಕೊಲೆಯ ಹಂತಕ್ಕೆ ತಲುಪಿತ್ತು. ಮಹಿಳೆಯ ಶವವನ್ನು ತನ್ನ ಮನೆಯ ಹಿಂದೆ ಕೇವಲ ಐದು ಮೀಟರ್‌ ದೂರದ ಗುಂಡಿಯಲ್ಲಿ ಹೂತು, ಮೂರು ತೆಂಗಿನ ಸಸಿಗಳನ್ನು ನೆಟ್ಟು ಅಪರಾಧವನ್ನು ಮರೆಮಾಚಲು ಯತ್ನಿಸಿದ್ದ.

ಎರಡು ವಾರಗಳ ನಂತರ ದೇಹವು ಕೊಳೆತ ಸ್ಥಿತಿಯಲ್ಲಿದ್ದು, ಮುಖ ವಿರೂಪಗೊಂಡಿತ್ತು. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಲಪ್ಪುಳ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಜಯಚಂದ್ರ ಹೇಗೆ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಪರಾಧದಲ್ಲಿ ಬೇರೆ ವ್ಯಕ್ತಿಗಳು ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ