AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಮಾರುವೇಷದಲ್ಲಿದ್ದ ಎಕ್ಸ್​-ರೇ ತಂತ್ರಜ್ಞ ಅರೆಸ್ಟ್

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಎಕ್ಷರೇ ತಂತ್ರಜ್ಞ ಎಸ್ಕೇಪ್ ಆಗಿದ್ದ. ದೂರಿನ ಅನ್ವಯ ಅಖಾಡಕ್ಕಿಳಿದಿದ್ದ ಬಾಗಲಕೋಟೆ ಪೊಲೀಸರು, ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಮಾರುವೇಷದಲ್ಲಿದ್ದ ಎಕ್ಸ್​-ರೇ ತಂತ್ರಜ್ಞ ಅರೆಸ್ಟ್
ಬಾಗಲಕೋಟೆಯಲ್ಲಿ ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಎಕ್ಸ್​ರೇ ತಂತ್ರಜ್ಞನನ್ನು ಪೊಲೀಸರು ಬಂಧಿಸಿದ್ದಾರೆ (ಸಾಂದರ್ಭಿಕ ಚಿತ್ರ)
Rakesh Nayak Manchi
Rakesh Nayak Manchi|

Updated on:Jun 06, 2023 | 4:24 PM

Share

ಬಾಗಲಕೋಟೆ: ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ (Fraud) ಎಕ್ಷರೇ ತಂತ್ರಜ್ಞನನ್ನು ಪೊಲೀಸರು ಎರಡೂವರೆ ವರ್ಷದ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವನಾಥ ತೆನಹಳ್ಳಿ ಬಂಧಿತ ಆರೋಪಿಯಾಗಿದ್ದಾನೆ. ಎಕ್ಷರೇ ಮಷಿನ್ ,ಸ್ಕ್ಯಾನಿಂಗ್ ಮಷಿನ್ ಕೊಡಿಸುವುದಾಗಿ ಹೇಳಿ ವೈದ್ಯರಿಂದ ಹಣ ಪಡೆದು ಪರಾರಿಯಾಗಿದ್ದನು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲಕೋಟೆ (Bagalkot) ನಗರ ಠಾಣೆ ಪೊಲೀಸರು, ಮಾರುವೇಷದಲ್ಲಿ ತಲೆಮರೆಸಿಕೊಂಡಿದ್ದ ವಿಶ್ವನಾಥನನ್ನು ಬಂಧಿಸಿದ್ದಾರೆ.

ಬಾಗಲಕೋಟೆಯ ವಾಸನದ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ವಿಶ್ವನಾಥ, ಲಭಾಂಶದ ಜೊತೆಗೆ ಎಕ್ಷರೇ ಮಷಿನ್, ಸ್ಕ್ಯಾನಿಂಗ್ ಮಷಿನ್ ಕೊಡಿಸುವುದಾಗಿ ನಂಬಿಸಿ ಬಾಗಲಕೋಟೆಯ ಪ್ರತಿಷ್ಟಿತ ವೈದ್ಯರಿಂದ 15 ಲಕ್ಷ, 20 ಲಕ್ಷದಂತೆ ಅನೇಕ ವೈದ್ಯರು ಹಾಗೂ ಅವರ ಸಂಬಂಧಿಕರಿಂದ ಎರಡು ಕೋಟಿಗೂ ಅಧಿಕ ಹಣ ಪಡೆದಿದ್ದ. ಹಣಕೊಟ್ಟವರಲ್ಲಿ ಡಾ ಸತೀಶ್ ಬಿರಾದಾರ, ಡಾ ಗಿರೀಶ್ ವಾಸನದ, ಬಸವರಾಜ ಹೂಗಾರ ಸೇರಿದಂತೆ ಅನೇಕರು ಸೇರಿದ್ದಾರೆ.

ಇದನ್ನೂ ಓದಿ: UPI Frauds: ಭಾರತದಲ್ಲಿ ಒಂದೇ ವರ್ಷದಲ್ಲಿ ಯುಪಿಐ ಸಂಬಂಧ 1 ಲಕ್ಷ ಸಮೀಪ ವಂಚನೆ ಪ್ರಕರಣಗಳು; ಹೇಗೆಲ್ಲಾ ವಂಚಿಸುತ್ತಾರೆ ನೋಡಿ

ಹೀಗೆ ನಂಬಿಸಿ ಹಣ ಪಡೆದು ಸಂಪರ್ಕಕ್ಕೇ ಸಿಗದೆ ಪರಾರಿಯಾಗಿದ್ದ ವಿಶ್ವನಾಥನ ವಿರುದ್ಧ ವೈದ್ಯ ಬಸವರಾಜ ಹೂಗಾರ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು, ವಿಶ್ವನಾಥ, ಆತನ ಪತ್ನಿ ರೂಪಾ, ಆತನ ಸ್ನೇಹಿತ ನಾಗರಾಜ ಅಕ್ಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಅಷ್ಟೇ ಅಲ್ಲದೆ, 6 ವೈದ್ಯರಿಗೆ ವಿಶ್ವನಾಥ ನೀಡಿದ್ದ ಚೆಕ್​ಗಳು ಕೂಡ ಬೌನ್ಸ್ ಆಗಿದ್ದವು. ಈ ಸಂಬಂಧವೂ ಪ್ರಕರಣ ದಾಖಲಾಗಿದೆ.

ಹಣ ಪಡೆದು ವಂಚಿಸಿದ್ದ ವಿಶ್ವನಾಥ ಕಳೆದ ಎರಡೂವರೆ ವರ್ಷದಿಂದ ಮಾರುವೇಷದಲ್ಲಿ ಕಿರಾಣಿ ಅಂಗಡಿ, ಹಮಾಲಿ, ಹೊಟೆಲ್‌ನಲ್ಲಿ ಪಾರ್ಸಲ್‌ ಕಟ್ಟಿಸುವ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಬೆಂಗಳೂರಿನ ಒಂದು ಹೊಟೆಲ್​ನಲ್ಲಿ ಪಾರ್ಸಲ್ ಕಟ್ಟುವ ಕೆಲಸ‌ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ವಿಶ್ವನಾಥ ತಗಲಾಕೊಂಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 6 June 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ