AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಮಾರುವೇಷದಲ್ಲಿದ್ದ ಎಕ್ಸ್​-ರೇ ತಂತ್ರಜ್ಞ ಅರೆಸ್ಟ್

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಎಕ್ಷರೇ ತಂತ್ರಜ್ಞ ಎಸ್ಕೇಪ್ ಆಗಿದ್ದ. ದೂರಿನ ಅನ್ವಯ ಅಖಾಡಕ್ಕಿಳಿದಿದ್ದ ಬಾಗಲಕೋಟೆ ಪೊಲೀಸರು, ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಮಾರುವೇಷದಲ್ಲಿದ್ದ ಎಕ್ಸ್​-ರೇ ತಂತ್ರಜ್ಞ ಅರೆಸ್ಟ್
ಬಾಗಲಕೋಟೆಯಲ್ಲಿ ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಎಕ್ಸ್​ರೇ ತಂತ್ರಜ್ಞನನ್ನು ಪೊಲೀಸರು ಬಂಧಿಸಿದ್ದಾರೆ (ಸಾಂದರ್ಭಿಕ ಚಿತ್ರ)
Rakesh Nayak Manchi
Rakesh Nayak Manchi|

Updated on:Jun 06, 2023 | 4:24 PM

Share

ಬಾಗಲಕೋಟೆ: ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ (Fraud) ಎಕ್ಷರೇ ತಂತ್ರಜ್ಞನನ್ನು ಪೊಲೀಸರು ಎರಡೂವರೆ ವರ್ಷದ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವನಾಥ ತೆನಹಳ್ಳಿ ಬಂಧಿತ ಆರೋಪಿಯಾಗಿದ್ದಾನೆ. ಎಕ್ಷರೇ ಮಷಿನ್ ,ಸ್ಕ್ಯಾನಿಂಗ್ ಮಷಿನ್ ಕೊಡಿಸುವುದಾಗಿ ಹೇಳಿ ವೈದ್ಯರಿಂದ ಹಣ ಪಡೆದು ಪರಾರಿಯಾಗಿದ್ದನು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಗಲಕೋಟೆ (Bagalkot) ನಗರ ಠಾಣೆ ಪೊಲೀಸರು, ಮಾರುವೇಷದಲ್ಲಿ ತಲೆಮರೆಸಿಕೊಂಡಿದ್ದ ವಿಶ್ವನಾಥನನ್ನು ಬಂಧಿಸಿದ್ದಾರೆ.

ಬಾಗಲಕೋಟೆಯ ವಾಸನದ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ವಿಶ್ವನಾಥ, ಲಭಾಂಶದ ಜೊತೆಗೆ ಎಕ್ಷರೇ ಮಷಿನ್, ಸ್ಕ್ಯಾನಿಂಗ್ ಮಷಿನ್ ಕೊಡಿಸುವುದಾಗಿ ನಂಬಿಸಿ ಬಾಗಲಕೋಟೆಯ ಪ್ರತಿಷ್ಟಿತ ವೈದ್ಯರಿಂದ 15 ಲಕ್ಷ, 20 ಲಕ್ಷದಂತೆ ಅನೇಕ ವೈದ್ಯರು ಹಾಗೂ ಅವರ ಸಂಬಂಧಿಕರಿಂದ ಎರಡು ಕೋಟಿಗೂ ಅಧಿಕ ಹಣ ಪಡೆದಿದ್ದ. ಹಣಕೊಟ್ಟವರಲ್ಲಿ ಡಾ ಸತೀಶ್ ಬಿರಾದಾರ, ಡಾ ಗಿರೀಶ್ ವಾಸನದ, ಬಸವರಾಜ ಹೂಗಾರ ಸೇರಿದಂತೆ ಅನೇಕರು ಸೇರಿದ್ದಾರೆ.

ಇದನ್ನೂ ಓದಿ: UPI Frauds: ಭಾರತದಲ್ಲಿ ಒಂದೇ ವರ್ಷದಲ್ಲಿ ಯುಪಿಐ ಸಂಬಂಧ 1 ಲಕ್ಷ ಸಮೀಪ ವಂಚನೆ ಪ್ರಕರಣಗಳು; ಹೇಗೆಲ್ಲಾ ವಂಚಿಸುತ್ತಾರೆ ನೋಡಿ

ಹೀಗೆ ನಂಬಿಸಿ ಹಣ ಪಡೆದು ಸಂಪರ್ಕಕ್ಕೇ ಸಿಗದೆ ಪರಾರಿಯಾಗಿದ್ದ ವಿಶ್ವನಾಥನ ವಿರುದ್ಧ ವೈದ್ಯ ಬಸವರಾಜ ಹೂಗಾರ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು, ವಿಶ್ವನಾಥ, ಆತನ ಪತ್ನಿ ರೂಪಾ, ಆತನ ಸ್ನೇಹಿತ ನಾಗರಾಜ ಅಕ್ಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಅಷ್ಟೇ ಅಲ್ಲದೆ, 6 ವೈದ್ಯರಿಗೆ ವಿಶ್ವನಾಥ ನೀಡಿದ್ದ ಚೆಕ್​ಗಳು ಕೂಡ ಬೌನ್ಸ್ ಆಗಿದ್ದವು. ಈ ಸಂಬಂಧವೂ ಪ್ರಕರಣ ದಾಖಲಾಗಿದೆ.

ಹಣ ಪಡೆದು ವಂಚಿಸಿದ್ದ ವಿಶ್ವನಾಥ ಕಳೆದ ಎರಡೂವರೆ ವರ್ಷದಿಂದ ಮಾರುವೇಷದಲ್ಲಿ ಕಿರಾಣಿ ಅಂಗಡಿ, ಹಮಾಲಿ, ಹೊಟೆಲ್‌ನಲ್ಲಿ ಪಾರ್ಸಲ್‌ ಕಟ್ಟಿಸುವ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಬೆಂಗಳೂರಿನ ಒಂದು ಹೊಟೆಲ್​ನಲ್ಲಿ ಪಾರ್ಸಲ್ ಕಟ್ಟುವ ಕೆಲಸ‌ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ವಿಶ್ವನಾಥ ತಗಲಾಕೊಂಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Tue, 6 June 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ