AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷದಿಂದಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ರೌಡಿಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
ಅಮೀನ್​ ಸಾಬ್​
| Edited By: |

Updated on: Mar 23, 2025 | 4:47 PM

Share

ಯಾದಗಿರಿ, ಮಾರ್ಚ್​ 23: ಇತ್ತೀಚೆಗೆ ಜಿಲ್ಲೆಯ ಶಹಾಪುರ (Shahapur) ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನನ್ನು ಹತ್ಯೆ (kill) ಮಾಡಲಾಗಿತ್ತು. 11 ವರ್ಷಗಳ ಹಿಂದೆ ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇದೀಗ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸದ್ಯ ಮೂವರು ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 16 ರಂದು ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಕ್ರಾಸ್ ಬಳಿ ಡಬಲ್ ಮರ್ಡರ್ ನಡೆದಿತ್ತು.  ಕಟಿಂಗ್ ಮಾಡಿಸಿಕೊಂಡು ಹೋಗ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಯಾದಗಿರಿಯಲ್ಲಿ ಡಬಲ್​ ಮರ್ಡರ್​: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ

ಇದನ್ನೂ ಓದಿ
Image
ಯಾದಗಿರಿ: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ
Image
ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ
Image
ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್
Image
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಇನ್ನು ಬಂಧಿತ ಆರೋಪಿ ಅರಳಹಳ್ಳಿಯ ನಿವಾಸಿ ಶಿವಪ್ಪಗೌಡ 11 ವರ್ಷಗಳ ಹಿಂದೆ ಅನೈತಿಕ ಸಂಬಂಧದಲ್ಲಿ ದಲಿತ ಮುಖಂಡ ಮಾಪಣ್ಣನ ಕಣ್ಣಿಗೆ ಸಿಕ್ಕಿಬಿದ್ದಿದ್ದ. ಆಗ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಇದೇ ವಿಚಾರಕ್ಕೆ ಮಾಪಣ್ಣ ಮತ್ತು ಶಿವಪ್ಪಗೌಡ ನಡುವೆ ದ್ವೇಷ ಬೆಳೆದಿತ್ತು. ಹಾಗಾಗಿ 2014ರಲ್ಲಿ ಮಾಪಣ್ಣ ಕೊಲೆಗೆ ರೌಡಿಶೀಟರ್ ಹುಸೇನಿಗೆ ಶಿವಪ್ಪಗೌಡ ಸುಪಾರಿ ಕೊಟ್ಟಿದ್ದ.

2014ರಲ್ಲಿ ಭೀಮರಾಯನಗುಡಿ ಬಳಿ ಮಾಪಣ್ಣನ ರೌಡಿಶೀಟರ್ ಹುಸೇನಿ ಗ್ಯಾಂಗ್​ ಗುಂಡಿನ ದಾಳಿ ಮಾಡಿತ್ತು. ಆಗ ಮಾಪಣ್ಣ ಜಸ್ಟ್ ಮಿಸ್ ಆಗಿ ಬದುಕುಳಿದಿದ್ದ. ಇದಾದ ಬಳಿಕ 3 ಬಾರಿ ಮಾಪ್ಪಣ್ಣನ ಮೇಲೆ ಗ್ಯಾಂಗ್ ದಾಳಿ ಮಾಡಿತ್ತು. 2019ರಲ್ಲಿ ಮಾಪಣ್ಣ ಗ್ಯಾಂಗ್ ಹುಸೇನಿಯ ಮೇಲೆ ಹಲ್ಲೆ ಮಾಡಿತ್ತು. ಇದರಿಂದಾಗಿ ಮಾಪಣ್ಣ ಹಾಗೂ ಹುಸೇನಿ ನಡುವೆ ದ್ವೇಷ ಬೆಳೆದಿತ್ತು.

ಇದನ್ನೂ ಓದಿ: ಯಾದಗಿರಿ: ಮದುವೆಯ ಆಸೆ ತೋರಿಸಿ ವಿಧವೆಯ ಜೊತೆ ಲವ್, ದೈಹಿಕ ಸಂಬಂಧ, ಲಕ್ಷಾಂತರ ರೂ. ವಂಚನೆ

ಪ್ರತಿ ಭಾನುವಾರ ಮಾಪಣ್ಣ ಭೀಮರಾಯನಗುಡಿಗೆ ಬರುತ್ತಿದ್ದ. ಬೈಕ್​ನಲ್ಲಿ ಬರುತ್ತಿದ್ದ ಮಾಪಣ್ಣನನ್ನು ಕಾರಿನಲ್ಲಿ ಬೆನ್ನಟ್ಟಿದ್ದ ಗ್ಯಾಂಗ್, ಸಾದ್ಯಾಪುರ ಕ್ರಾಸ್ ಬಳಿ ಮಾಪಣ್ಣನ ಬೈಕ್​ಗೆ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್​ನಲ್ಲಿ ಖಾಸಗಿ ಶಾಲೆಯ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಉದಯ್ ಕುಮಾರ್(22), ಜಾರ್ಖಂಡ್​ ಮೂಲದ ಕಾರ್ಮಿಕ ಪ್ರಕಾಶ್ ಮಾಂಖಿ(25) ಮೃತರು. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ