Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Yadgir News: ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಕುರಿತಾಗಿ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನ ಮಾಡಿದ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮೃತ ಬಾಲಕ ಕಾಶಿನಾಥ್ ಚೌಹಾಣ್‌
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2023 | 8:26 PM

ಯಾದಗಿರಿ, ಆಗಸ್ಟ್​ 07: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ (dies) ಘಟನೆ ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ. ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಳ್ಳನನ್ನು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಪ್ರಯಾಣಿಕರು

ಚಿಕ್ಕಬಳ್ಳಾಪುರ: ನಗರದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರ ವಶಕ್ಕೆ ನೀಡಿರುವಂತಹ ಘಟನೆ ನಡೆದಿದೆ. ಬಸ್ ಹತ್ತುವ ವೇಳೆ ಈಶ್ವರ್ ರೆಡ್ಡಿ ಎಂಬುವರ ಒಂದೂವರೆ ಲಕ್ಷ ರೂ. ಮೌಲ್ಯದ ಐಫೋನ್​ ಅನ್ನು ಕಳ್ಳತನ ಮಾಡಿ, ಪರಾರಿಯಾಗುತ್ತಿದ್ದ ಕಳ್ಳನನ್ನು ಪ್ರಯಾಣಿಕರು ಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ್ದಾರೆ.

ಇದನ್ನೂ ಓದಿ: Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣು

ನೆಲಮಂಗಲ: ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಮಲ್ಲಸಂದ್ರದಲ್ಲಿ ದಿಲೀಪ್(30) ಆತ್ಮಹತ್ಯೆ ಮಾಡಿಕೊಂಡು ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಮೃತ ದಿಲೀಪ್ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ.

ಆಷಾಢ ಮಾಸ ಹಿನ್ನೆಲೆ ಕ್ಯಾಟರಿಂಗ್ ಆರ್ಡರ್ ಸಿಕ್ಕಿರಲಿಲ್ಲ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ 2 ಲಕ್ಷ ರೂಪಾಯಿ ಸಾಲ ಮಾಡಿದ್ದ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಆತ್ಮಹತ್ಯೆ ಆರೋಪ ಕೇಳಿಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಜಗಳ ಬಿಡಿಸಲು ಬಂದ ವೃದ್ಧೆಯ ಕೊಲೆ

ರಾಮನಗರ: ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿಯಲ್ಲಿ ಜಗಳ ಬಿಡಿಸಲು ಬಂದ ವೃದ್ಧೆ ಕೊಲೆ ಆಗಿರುವಂತಹ ಘಟನೆ ನಡೆದಿದೆ. ಶಿವಲಿಂಗಮ್ಮ‌(80)‌ ಮೃತ ದುರ್ದೈವಿ. ವೃದ್ಧೆ ಎದೆಗೆ ಒದ್ದು ಅದೇ ಗ್ರಾಮದ ‌ಮಂಜು ಕೊಲೆಗೈದ ಆರೋಪ ಕೇಳಿಬಂದಿದೆ.

ಸಾಲಗಾರರಿಗೆ ಮನೆ ತೋರಿಸಿದ್ದಕ್ಕೆ ಸಿಟ್ಟಾಗಿದ್ದ ಮಂಜು, ತನ್ನ ಮನೆಗೆ ಸಾಲಗಾರರನ್ನು ಕಳುಹಿಸಿದ್ದಾಳೆ ಅಂತ ಮನೆಗೆ ನುಗ್ಗಿ ಸದಸ್ಯರ ಮೇಲೆ ಹಲ್ಲೆ ಮಾಡಲಾಗಿದೆ. ಸೊಸೆ, ಮಕ್ಕಳ ಮೇಲಿನ ಹಲ್ಲೆ ತಡೆಯಲು ಬಂದಿದ್ದ ಶಿವಲಿಂಗಮ್ಮ, ಈ ವೇಳೆ ಎದೆಗೆ ಗುದ್ದಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ