ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Yadgir News: ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಕುರಿತಾಗಿ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನ ಮಾಡಿದ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮೃತ ಬಾಲಕ ಕಾಶಿನಾಥ್ ಚೌಹಾಣ್‌
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2023 | 8:26 PM

ಯಾದಗಿರಿ, ಆಗಸ್ಟ್​ 07: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ (dies) ಘಟನೆ ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ. ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಳ್ಳನನ್ನು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಪ್ರಯಾಣಿಕರು

ಚಿಕ್ಕಬಳ್ಳಾಪುರ: ನಗರದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರ ವಶಕ್ಕೆ ನೀಡಿರುವಂತಹ ಘಟನೆ ನಡೆದಿದೆ. ಬಸ್ ಹತ್ತುವ ವೇಳೆ ಈಶ್ವರ್ ರೆಡ್ಡಿ ಎಂಬುವರ ಒಂದೂವರೆ ಲಕ್ಷ ರೂ. ಮೌಲ್ಯದ ಐಫೋನ್​ ಅನ್ನು ಕಳ್ಳತನ ಮಾಡಿ, ಪರಾರಿಯಾಗುತ್ತಿದ್ದ ಕಳ್ಳನನ್ನು ಪ್ರಯಾಣಿಕರು ಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ್ದಾರೆ.

ಇದನ್ನೂ ಓದಿ: Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣು

ನೆಲಮಂಗಲ: ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಮಲ್ಲಸಂದ್ರದಲ್ಲಿ ದಿಲೀಪ್(30) ಆತ್ಮಹತ್ಯೆ ಮಾಡಿಕೊಂಡು ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಮೃತ ದಿಲೀಪ್ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ.

ಆಷಾಢ ಮಾಸ ಹಿನ್ನೆಲೆ ಕ್ಯಾಟರಿಂಗ್ ಆರ್ಡರ್ ಸಿಕ್ಕಿರಲಿಲ್ಲ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ 2 ಲಕ್ಷ ರೂಪಾಯಿ ಸಾಲ ಮಾಡಿದ್ದ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಆತ್ಮಹತ್ಯೆ ಆರೋಪ ಕೇಳಿಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಜಗಳ ಬಿಡಿಸಲು ಬಂದ ವೃದ್ಧೆಯ ಕೊಲೆ

ರಾಮನಗರ: ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿಯಲ್ಲಿ ಜಗಳ ಬಿಡಿಸಲು ಬಂದ ವೃದ್ಧೆ ಕೊಲೆ ಆಗಿರುವಂತಹ ಘಟನೆ ನಡೆದಿದೆ. ಶಿವಲಿಂಗಮ್ಮ‌(80)‌ ಮೃತ ದುರ್ದೈವಿ. ವೃದ್ಧೆ ಎದೆಗೆ ಒದ್ದು ಅದೇ ಗ್ರಾಮದ ‌ಮಂಜು ಕೊಲೆಗೈದ ಆರೋಪ ಕೇಳಿಬಂದಿದೆ.

ಸಾಲಗಾರರಿಗೆ ಮನೆ ತೋರಿಸಿದ್ದಕ್ಕೆ ಸಿಟ್ಟಾಗಿದ್ದ ಮಂಜು, ತನ್ನ ಮನೆಗೆ ಸಾಲಗಾರರನ್ನು ಕಳುಹಿಸಿದ್ದಾಳೆ ಅಂತ ಮನೆಗೆ ನುಗ್ಗಿ ಸದಸ್ಯರ ಮೇಲೆ ಹಲ್ಲೆ ಮಾಡಲಾಗಿದೆ. ಸೊಸೆ, ಮಕ್ಕಳ ಮೇಲಿನ ಹಲ್ಲೆ ತಡೆಯಲು ಬಂದಿದ್ದ ಶಿವಲಿಂಗಮ್ಮ, ಈ ವೇಳೆ ಎದೆಗೆ ಗುದ್ದಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್