AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Yadgir News: ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಕುರಿತಾಗಿ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನ ಮಾಡಿದ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಯಾದಗಿರಿ: ಭತ್ತ ನಾಟಿ ಮಾಡಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
ಮೃತ ಬಾಲಕ ಕಾಶಿನಾಥ್ ಚೌಹಾಣ್‌
ಅಮೀನ್​ ಸಾಬ್​
| Edited By: |

Updated on: Aug 07, 2023 | 8:26 PM

Share

ಯಾದಗಿರಿ, ಆಗಸ್ಟ್​ 07: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವಂತಹ (dies) ಘಟನೆ ಯಾದಗಿರಿ ತಾಲೂಕಿನ ಯರಗೋಳ ಸಮೀಪದ ಅಡಮಡಿ ತಾಂಡಾದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಮಾಡಲು ಹೋದಾಗ ಅವಘಡ ಸಂಭವಿಸಿದೆ. ಕಾಶಿನಾಥ್ ಚೌಹಾಣ್ (14) ಮೃತ ಬಾಲಕ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಳ್ಳನನ್ನು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಪ್ರಯಾಣಿಕರು

ಚಿಕ್ಕಬಳ್ಳಾಪುರ: ನಗರದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳನನ್ನು ಥಳಿಸಿ ಪ್ರಯಾಣಿಕರು ಪೊಲೀಸರ ವಶಕ್ಕೆ ನೀಡಿರುವಂತಹ ಘಟನೆ ನಡೆದಿದೆ. ಬಸ್ ಹತ್ತುವ ವೇಳೆ ಈಶ್ವರ್ ರೆಡ್ಡಿ ಎಂಬುವರ ಒಂದೂವರೆ ಲಕ್ಷ ರೂ. ಮೌಲ್ಯದ ಐಫೋನ್​ ಅನ್ನು ಕಳ್ಳತನ ಮಾಡಿ, ಪರಾರಿಯಾಗುತ್ತಿದ್ದ ಕಳ್ಳನನ್ನು ಪ್ರಯಾಣಿಕರು ಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ್ದಾರೆ.

ಇದನ್ನೂ ಓದಿ: Mandya News: ಸ್ನೇಹಿತರ ದಿನದಂದೇ ಮಂಡ್ಯದಲ್ಲಿ ಚಾಕುವಿನಿಂದ ಇರಿದು ಗೆಳೆಯನ ಭೀಕರ ಕೊಲೆ

ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣು

ನೆಲಮಂಗಲ: ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಮಲ್ಲಸಂದ್ರದಲ್ಲಿ ದಿಲೀಪ್(30) ಆತ್ಮಹತ್ಯೆ ಮಾಡಿಕೊಂಡು ಯುವಕ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಮೃತ ದಿಲೀಪ್ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ.

ಆಷಾಢ ಮಾಸ ಹಿನ್ನೆಲೆ ಕ್ಯಾಟರಿಂಗ್ ಆರ್ಡರ್ ಸಿಕ್ಕಿರಲಿಲ್ಲ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ 2 ಲಕ್ಷ ರೂಪಾಯಿ ಸಾಲ ಮಾಡಿದ್ದ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಆತ್ಮಹತ್ಯೆ ಆರೋಪ ಕೇಳಿಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಕೇಸ್, 11 ಆರೋಪಿಗಳು ಪೊಲೀಸ್ ವಶಕ್ಕೆ

ಜಗಳ ಬಿಡಿಸಲು ಬಂದ ವೃದ್ಧೆಯ ಕೊಲೆ

ರಾಮನಗರ: ಚನ್ನಪಟ್ಟಣ ತಾಲೂಕಿನ ಮೈಲನಾಯ್ಕನಹಳ್ಳಿಯಲ್ಲಿ ಜಗಳ ಬಿಡಿಸಲು ಬಂದ ವೃದ್ಧೆ ಕೊಲೆ ಆಗಿರುವಂತಹ ಘಟನೆ ನಡೆದಿದೆ. ಶಿವಲಿಂಗಮ್ಮ‌(80)‌ ಮೃತ ದುರ್ದೈವಿ. ವೃದ್ಧೆ ಎದೆಗೆ ಒದ್ದು ಅದೇ ಗ್ರಾಮದ ‌ಮಂಜು ಕೊಲೆಗೈದ ಆರೋಪ ಕೇಳಿಬಂದಿದೆ.

ಸಾಲಗಾರರಿಗೆ ಮನೆ ತೋರಿಸಿದ್ದಕ್ಕೆ ಸಿಟ್ಟಾಗಿದ್ದ ಮಂಜು, ತನ್ನ ಮನೆಗೆ ಸಾಲಗಾರರನ್ನು ಕಳುಹಿಸಿದ್ದಾಳೆ ಅಂತ ಮನೆಗೆ ನುಗ್ಗಿ ಸದಸ್ಯರ ಮೇಲೆ ಹಲ್ಲೆ ಮಾಡಲಾಗಿದೆ. ಸೊಸೆ, ಮಕ್ಕಳ ಮೇಲಿನ ಹಲ್ಲೆ ತಡೆಯಲು ಬಂದಿದ್ದ ಶಿವಲಿಂಗಮ್ಮ, ಈ ವೇಳೆ ಎದೆಗೆ ಗುದ್ದಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ