AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೆಪ್​ ಆಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಕಳ್ಳತನದ ಆರೋಪಿ ಕಾಲಿಗೆ ಯಾದಗಿರಿ ಪೊಲೀಸರು ಫೈರಿಂಗ್​ ಮಾಡಿರುವ ಘಟನೆ ನಗರದ ವರ್ಕನಳ್ಳಿ ರಸ್ತೆ ಬಳಿ ನಡೆದಿದೆ. ಮಹಮ್ಮದ್ ರಫಿ ಗುಂಡೇಟು ತಿಂದ ಅರೋಪಿ.

ಯಾದಗಿರಿ: ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೆಪ್​ ಆಗಲು ಯತ್ನಿಸಿದ ಆರೋಪಿಗೆ ಗುಂಡೇಟು
ಮಹಮ್ಮದ್ ರಫಿ (ಎಡಚಿತ್ರ)
ವಿವೇಕ ಬಿರಾದಾರ
|

Updated on:Mar 13, 2023 | 9:51 AM

Share

ಯಾದಗಿರಿ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಕಳ್ಳತನದ ಆರೋಪಿ ಕಾಲಿಗೆ ಯಾದಗಿರಿ ಪೊಲೀಸರು (Yadgiri Police) ಫೈರಿಂಗ್​ (Firing) ಮಾಡಿರುವ ಘಟನೆ ನಗರದ ವರ್ಕನಳ್ಳಿ ರಸ್ತೆ ಬಳಿ ನಡೆದಿದೆ. ಮಹಮ್ಮದ್ ರಫಿ ಗುಂಡೇಟು ತಿಂದ ಅರೋಪಿ. ಸದ್ಯ ಆರೋಪಿ ಮಹಮ್ಮದ್ ರಫಿಯನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಹಾಗೆ ಗಾಯಗೊಂಡ ಸಿಪಿಐ ಹಾಗೂ ಸಿಬ್ಬಂದಿಗಳನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಪಿ ಸಿ.ಬಿ ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳಿಂದ ಸಿಪಿಐ ಹಾಗೂ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ್ದಾರೆ.

ಕಣ್ಣಿಗೆ ಕಾರದ ಪುಡಿ ಎರಚಿ ಲಕ್ಷಾಂತರ ರೂ ದೋಚಿದ್ದ ಆರೋಪಿ

ಡಕಾಯಿತಿ ಗುಂಪು ಫೆಬ್ರವರಿ 24ರಂದು ಯಾದಗಿರಿಯ ನಂದಕಿಶೋರ್ ಎಂಬುವರ ಮೆನೆಯನ್ನು ಟಾರ್ಗೆಟ್​ ಮಾಡಿತ್ತು. ಅಂದು ಗ್ಯಾಂಗ್​ ಮನೆಗೆ ನುಗ್ಗಿ ಮನೆ ಮಂದಿ ಕಣ್ಣಿಗೆ ಕಾರದ ಪುಡಿ ಎರಚಿ ಲಕ್ಷಾಂತರ ರೂ ದೋಚಿ ಪರಾರಿಯಾಗಿದ್ದತ್ತು. ಈ ಗುಂಪಿನ ನಾಯಕ ಮಹಮ್ಮದ್ ರಫಿಯಾಗಿದ್ದಾನೆ. ಈ ಸಂಬಂಧ ಯಾದಗಿರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕ್ರೀಡಾಕೂಟದ ವೇಳೆ 8ನೇ ತರಗತಿ ವಿದ್ಯಾರ್ಥಿನಿಯ ಅಪಹರಣ, ಸಾಮೂಹಿಕ ಅತ್ಯಾಚಾರ

ಆರೋಪಿಗಳನ್ನು ಸೆರೆ ಹಿಡಿಯಲು ಎಸ್ಪಿ ಸಿಬಿ ವೇದಮೂರ್ತಿ, ಸಿಪಿಐ ಸುನೀಲ್ ಮೂಲಿಮನಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು. ಪೊಲೀಸರ ತಂಡ ನಿನ್ನೆ (ಮಾ.12) 4 ಜನ ಆರೋಪಿಗಳನ್ನು ಬಂಧಿಸಿತ್ತು. ಪ್ರಕರಣದ ಎ1 ಆರೋಪಿ ಮಹಮ್ಮದ್ ರಫಿ ಪೊಲೀಸರಿಂದ ತಲೆಮರಿಸಿಕೊಂಡು ತಿರುಗಾಡುತ್ತಿದ್ದನು. ಆರೋಪಿ ಮಹಮ್ಮದ್ ರಫಿ ಅಡಗಿದ್ದ ಸ್ಥಳದ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆ ಇಂದು (ಮಾ.13) ಬೆಳಗ್ಗೆ ಪೊಲೀಸರ ಬಂಧಿಸಲು ಹೋದಾಗ, ಪಿಸ್ತೂಲ್ ಹಾಗೂ ಚಾಕೂ ಹೊಂದಿದ್ದ ಮಹಮ್ಮದ್ ರಫಿ ಯಾದಗಿರಿ ಸಿಪಿಐ ಸುನೀಲ್ ವಿ ಮೂಲಿಮನಿ, ಪಿಸಿ ಅಬ್ದುಲ್ ಭಾಷ್​​ ಹಾಗೂ ಹರಿನಾಥರೆಡ್ಡಿ ಮೇಲೆ ಮನಸೋ ಇಚ್ಚೆ ಚಾಕುವಿನಿಂದ ದಾಳಿ ಮಾಡಿ ತಳ್ಳಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸಿಪಿಐ ಸುನೀಲ್ ಮೂಲಿಮನಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪೊಲೀಸರೆಂದು ಹೇಳಿ 1 ಕೋಟಿ 12 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ದೋಚಿದ ಖದೀಮರು

ಬೆಂಗಳೂರುಳ: ಖದೀಮರು ಪೊಲೀಸರೆಂದು ಹೇಳಿ 1 ಕೋಟಿ 12 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ದೋಚಿದ ಘಟನೆ ನಗರದ ಆನಂದ್ ರಾವ್ ಸರ್ಕಲ್ ಬಳಿ ನಡೆದಿದೆ. 2 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಕಳ್ಳತನವಾಗಿದೆ. ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಂಠಪೂರ್ತಿ ಕುಡಿದು ರಾತ್ರಿ ಮನೆಗೆ ಹೊರಟವನು ಬೀದಿಯಲ್ಲಿ ಶವವಾಗಿ ಬಿದ್ದಿದ್ದ, ಕೊಲೆ ಎಂದು ಆರೋಪಿಸಿದ ತಾಯಿ

2 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಕಳ್ಳತನ

ಅಬ್ದುಲ್ ರಜಾಕ್, ಮಲ್ಲಯ್ಯ ಹಾಗೂ ಸುನೀಲ್ ಎಂಬುವರು ರಾಯಚೂರಿನ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾಲೀಕರ ಸೂಚನೆಯಂತೆ ಚಿನ್ನದ ಗಟ್ಟಿ ಖರೀದಿಗೆ ಬೆಂಗಳೂರಿಗೆ ಬಂದಿದ್ದರು. ಅದರಂತೆ ಚಿನ್ನದ ಖರೀದಿಗೆ ಬಂದು ಬೆಂಗಳೂರಿನಲ್ಲಿ ಚಿನ್ನ ಖರೀದಿ ಮಾಡಿದ್ದರು. ಮಾರ್ಚ್ 11 ರ ರಾತ್ರಿ ವಾಪಸ್ಸು ರಾಯಚೂರಿಗೆ ಹೋಗಲೆಂದು ಬಸ್​ನಲ್ಲಿ ಕುಳಿತಿದ್ದರು. ಆಗ ಅಬ್ದುಲ್ ರಜಾಕ್ ಹಾಗೂ ಮಲ್ಲಯ್ಯ ಶೌಚಾಲಯಕ್ಕೆಂದು ಸುನೀಲ್​ ಒಬ್ಬನನ್ನೇ ಬಸ್​ನಲ್ಲಿ ಬಿಟ್ಟು, ಚಿನ್ನದ ಗಟ್ಟಿ ಇದ್ದ ಬ್ಯಾಗ್ ಸಮೇತ ಶೌಚಾಲಯದತ್ತ ತೆರಳುತ್ತಿದ್ದರು.

ಈ ವೇಳೆ ಆಗಮಿಸಿದ ಇಬ್ಬರು ತಾವು ಪೊಲೀಸರೆಂದು ಇಬ್ಬರನ್ನು ಎಲ್ಲಿಗೊ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರ ಬಳಿಯಿದ್ದ ಬ್ಯಾಗ್ ಕಸಿದು ಪರಾರಿಯಾಗಿದ್ದಾರೆ. ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Mon, 13 March 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್