AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು. ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ […]

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!
ಸಾಧು ಶ್ರೀನಾಥ್​
|

Updated on:Feb 19, 2020 | 10:50 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು.

ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಬಾಡಿಗೆ ಪಡೆದ ಕಾರ್​ಗೆ ತಿಂಗಳಿಗೆ ಇಂತಿಷ್ಟು ಎಂದು ಮಾಲೀಕರಿಗೆ ಆರೋಪಿಗಳು ಹಣ ಕೊಡುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ವಂಚಿಸುತ್ತಿದ್ದ ಗ್ಯಾಂಗ್: ಎರಡು ತಿಂಗಳಲ್ಲಿ ಹಲವು ಬಾರಿ ಕಾರ್ ಪಡೆದು ಸರಿಯಾದ ಸಮಯಕ್ಕೆ ಹಣ ನೀಡಿ ಕಾರ್ ಮಾಲೀಕನಿಗೆ ವಂಚಕರು ಹತ್ತಿರವಾಗುತ್ತಿದ್ದರು. ಮಾಲೀಕರಿಗೆ ಹತ್ತಿರವಾದ ಬಳಿಕ ಯಾವುದೇ ದಾಖಲೆ ನೀಡದೆ ಕಾರ್ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ಆ ಕಾರುಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಆ ಬಳಿಕ ಕದ್ದ ಕಾರನ್ನು ಬೇರೊಬ್ಬರಿಗೆ ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

8 ಕಾರುಗಳು ಜಪ್ತಿ: ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ವಿಜಯ್ ಗೌಡ ಎಂಬುವರು ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಖತರ್ನಾಕ್ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇದೇ ಮಾದರಿಯಾಗಿ 10 ಕಾರುಗಳನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ವಿವಿಧ ಮಾದರಿಯ 8 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಪರಾರಿಯಾದ ಪ್ರಮುಖ ಆರೋಪಿ ನಿರಂಜನ್​ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Published On - 10:48 am, Wed, 19 February 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್