AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು. ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ […]

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!
ಸಾಧು ಶ್ರೀನಾಥ್​
|

Updated on:Feb 19, 2020 | 10:50 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು.

ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಬಾಡಿಗೆ ಪಡೆದ ಕಾರ್​ಗೆ ತಿಂಗಳಿಗೆ ಇಂತಿಷ್ಟು ಎಂದು ಮಾಲೀಕರಿಗೆ ಆರೋಪಿಗಳು ಹಣ ಕೊಡುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ವಂಚಿಸುತ್ತಿದ್ದ ಗ್ಯಾಂಗ್: ಎರಡು ತಿಂಗಳಲ್ಲಿ ಹಲವು ಬಾರಿ ಕಾರ್ ಪಡೆದು ಸರಿಯಾದ ಸಮಯಕ್ಕೆ ಹಣ ನೀಡಿ ಕಾರ್ ಮಾಲೀಕನಿಗೆ ವಂಚಕರು ಹತ್ತಿರವಾಗುತ್ತಿದ್ದರು. ಮಾಲೀಕರಿಗೆ ಹತ್ತಿರವಾದ ಬಳಿಕ ಯಾವುದೇ ದಾಖಲೆ ನೀಡದೆ ಕಾರ್ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ಆ ಕಾರುಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಆ ಬಳಿಕ ಕದ್ದ ಕಾರನ್ನು ಬೇರೊಬ್ಬರಿಗೆ ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

8 ಕಾರುಗಳು ಜಪ್ತಿ: ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ವಿಜಯ್ ಗೌಡ ಎಂಬುವರು ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಖತರ್ನಾಕ್ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇದೇ ಮಾದರಿಯಾಗಿ 10 ಕಾರುಗಳನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ವಿವಿಧ ಮಾದರಿಯ 8 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಪರಾರಿಯಾದ ಪ್ರಮುಖ ಆರೋಪಿ ನಿರಂಜನ್​ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Published On - 10:48 am, Wed, 19 February 20

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು