AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು. ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ […]

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!
ಸಾಧು ಶ್ರೀನಾಥ್​
|

Updated on:Feb 19, 2020 | 10:50 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು.

ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಬಾಡಿಗೆ ಪಡೆದ ಕಾರ್​ಗೆ ತಿಂಗಳಿಗೆ ಇಂತಿಷ್ಟು ಎಂದು ಮಾಲೀಕರಿಗೆ ಆರೋಪಿಗಳು ಹಣ ಕೊಡುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ವಂಚಿಸುತ್ತಿದ್ದ ಗ್ಯಾಂಗ್: ಎರಡು ತಿಂಗಳಲ್ಲಿ ಹಲವು ಬಾರಿ ಕಾರ್ ಪಡೆದು ಸರಿಯಾದ ಸಮಯಕ್ಕೆ ಹಣ ನೀಡಿ ಕಾರ್ ಮಾಲೀಕನಿಗೆ ವಂಚಕರು ಹತ್ತಿರವಾಗುತ್ತಿದ್ದರು. ಮಾಲೀಕರಿಗೆ ಹತ್ತಿರವಾದ ಬಳಿಕ ಯಾವುದೇ ದಾಖಲೆ ನೀಡದೆ ಕಾರ್ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ಆ ಕಾರುಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಆ ಬಳಿಕ ಕದ್ದ ಕಾರನ್ನು ಬೇರೊಬ್ಬರಿಗೆ ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

8 ಕಾರುಗಳು ಜಪ್ತಿ: ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ವಿಜಯ್ ಗೌಡ ಎಂಬುವರು ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಖತರ್ನಾಕ್ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇದೇ ಮಾದರಿಯಾಗಿ 10 ಕಾರುಗಳನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ವಿವಿಧ ಮಾದರಿಯ 8 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಪರಾರಿಯಾದ ಪ್ರಮುಖ ಆರೋಪಿ ನಿರಂಜನ್​ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Published On - 10:48 am, Wed, 19 February 20

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ