AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು. ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ […]

ಕಾರು ಬಾಡಿಗೆ ಪಡೆದು ವಂಚಿಸುತ್ತಿದ್ದ ನಟೋರಿಯಸ್ ಗ್ಯಾಂಗ್ ಅಂದರ್!
ಸಾಧು ಶ್ರೀನಾಥ್​
|

Updated on:Feb 19, 2020 | 10:50 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ಗ್ಯಾಂಗ್​ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಖಲೀಲ್ ಉಲ್ಲಾ ಹಾಗೂ ಅಕ್ಷಯ್ ಬಂಧಿತ ಆರೋಪಿಗಳು.

ಮೊದಲಿಗೆ ಆರೋಪಿಗಳು ಕಾರು ಮಾಲೀಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ನಂತರ ಪರಿಚಯಸ್ಥರಿಗೆ ಕಾರ್ ಬಾಡಿಗೆ ಬೇಕು ಹೆಚ್ಚು ಹಣ ನೀಡ್ತಾರೆ ಅಂತ ಕಥೆ ಹೇಳುತ್ತಿದ್ರು. ಮಧ್ಯವರ್ತಿಯಾಗಿ ಕೆಲಸ ಮಾಡುತಿದ್ದ ಅಕ್ಷಯ್ ಬಣ್ಣ ಬಣ್ಣದ ಕಥೆ ಹೇಳುತ್ತಿದ್ದ. ಅದೇ ರೀತಿ ಕೆಲ ದಾಖಲೆಗಳನ್ನು ಪಡೆದು ಮಾಲೀಕರು ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಬಾಡಿಗೆ ಪಡೆದ ಕಾರ್​ಗೆ ತಿಂಗಳಿಗೆ ಇಂತಿಷ್ಟು ಎಂದು ಮಾಲೀಕರಿಗೆ ಆರೋಪಿಗಳು ಹಣ ಕೊಡುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ವಂಚಿಸುತ್ತಿದ್ದ ಗ್ಯಾಂಗ್: ಎರಡು ತಿಂಗಳಲ್ಲಿ ಹಲವು ಬಾರಿ ಕಾರ್ ಪಡೆದು ಸರಿಯಾದ ಸಮಯಕ್ಕೆ ಹಣ ನೀಡಿ ಕಾರ್ ಮಾಲೀಕನಿಗೆ ವಂಚಕರು ಹತ್ತಿರವಾಗುತ್ತಿದ್ದರು. ಮಾಲೀಕರಿಗೆ ಹತ್ತಿರವಾದ ಬಳಿಕ ಯಾವುದೇ ದಾಖಲೆ ನೀಡದೆ ಕಾರ್ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ಆ ಕಾರುಗಳನ್ನು ಕದ್ದು ಪರಾರಿಯಾಗುತ್ತಿದ್ದರು. ಆ ಬಳಿಕ ಕದ್ದ ಕಾರನ್ನು ಬೇರೊಬ್ಬರಿಗೆ ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು.

8 ಕಾರುಗಳು ಜಪ್ತಿ: ಈ ಬಗ್ಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ವಿಜಯ್ ಗೌಡ ಎಂಬುವರು ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಖತರ್ನಾಕ್ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಇದೇ ಮಾದರಿಯಾಗಿ 10 ಕಾರುಗಳನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ವಿವಿಧ ಮಾದರಿಯ 8 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಪರಾರಿಯಾದ ಪ್ರಮುಖ ಆರೋಪಿ ನಿರಂಜನ್​ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Published On - 10:48 am, Wed, 19 February 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್