AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 4:17 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ