ಮೈಸೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆಗೆ ಶರಣು

ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗೌಡನಹಳ್ಳಿಯಲ್ಲಿ ನಡೆದಿದೆ.

ಮೈಸೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆಗೆ ಶರಣು
ಮೃತ ನಿಸರ್ಗಾ ಮತ್ತು ಸುಹಾಸ್​ ರೆಡ್ಡಿ
Follow us
| Updated By: ವಿವೇಕ ಬಿರಾದಾರ

Updated on:Jul 23, 2023 | 9:37 AM

ಮೈಸೂರು: ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ (Young Girl) ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ (KR Nagar) ತಾಲೂಕಿನ ಗೌಡನಹಳ್ಳಿಯಲ್ಲಿ ನಡೆದಿದೆ. ನಿಸರ್ಗಾ ಮೃತ ಯುವತಿ. ನಿಸರ್ಗಾ ಕೆ.ಆರ್ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದಳು. ನಿಸರ್ಗಾಳಿಗೆ ಸುಹಾಸ್ ರೆಡ್ಡಿ ಎಂಬ ಯುವಕನ ಪರಿಚಯಚಾಗುತ್ತದೆ. ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗುತ್ತಿದೆ. ಆದರೆ ಇತ್ತೀಚಿಗೆ ಕೆಲದಿನಗಳಿಂದ ಪ್ರಿಯತಮ ಸುಹಾಸ್ ವರ್ತನೆಯಲ್ಲಿ ಬದಲಾವಣೆ ಕಂಡಿದ್ದು, ಆತ ಮತ್ತೊಬ್ಬ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು.

ಇದರಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ನಿಸರ್ಗಾ ಕೈ ಕೊಯ್ದುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಫೋಟೊ ಹಾಕಿದ್ದಳು. ಹಾಗೆ ಈ ವಿಚಾರವನ್ನು ನಿಸರ್ಗಾ, ಪ್ರಿಯತಮ ಸುಹಾಸ್​ಗೆ ಇತ್ತೀಚಿಗೆ ಪರಿಚಯವಾಗಿದ್ದ ಮೊತ್ತೊಬ್ಬ ಯುವತಿಯ ಪೋಷಕರಿಗೂ ತಿಳಿಸಿದ್ದಾಳೆ. ಆಗ ಪೋಷಕರು ಕೆಟ್ಟದಾಗಿ ನಿಂದಿಸಿ ಸಾಯುವಂತೆ ಪ್ರೇರೇಪಿಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಹಿಳೆಯಿಂದ ಪ್ರಿಯಕರನಿಗೆ ಚಾಕು ಇರಿತ; ಅಸ್ಸಾಂಗೆ ಪರಾರಿಯಾಗಲು ಯತ್ನ

ಇದರಿಂದ ನೊಂದ ನಿಸರ್ಗಾ ಡೆತ್ ನೋಟ್ ಬರೆದು ಇಲಿ ಪಾಷಾಣ ತೆಗೆದುಕೊಂಡಿದ್ದಾಳೆ. ಕೂಡಲೆ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನಿಸರ್ಗಾ ಸಾವನ್ನಪ್ಪಿದ್ದಾಳೆ. ಇನ್ನು ನಿಸರ್ಗಾ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಆರೋಪಿ ಸುಹಾಸ್​​ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸುಹಾಸ್, ಹಾಗೂ ಇತ್ತೀಚಿಗೆ ಪರಿಚಯವಾದ ಯುವತಿ ಪೋಷಕರು ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Sun, 23 July 23

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು