AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ! ಮೈಸೂರಿನಲ್ಲಿ ಆರೋಪಿ ಬಂಧನ

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ ದೇಹ ಶೇಕಡಾ 30ರಷ್ಟು ಸುಟ್ಟು ಹೋಗಿದೆ. ಸದ್ಯ ಆರೋಪಿ ಜನತಾ ಅದಕ್​ನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಬಳಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ! ಮೈಸೂರಿನಲ್ಲಿ ಆರೋಪಿ ಬಂಧನ
ಬಂಧಿತ ಆರೋಪಿ, ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ
TV9 Web
| Edited By: sandhya thejappa|

Updated on:May 31, 2022 | 1:00 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಆ್ಯಸಿಡ್ (Acid) ದಾಳಿ ಘಟನೆ ಮಾಸುವ ಮುನ್ನಾ ಇನ್ನೊಂದು ಘಟನೆ ನಡೆದಿದೆ. ಕಬ್ಬನ್​ಪೇಟೆ 10ನೇ ಕ್ರಾಸ್​ನಲ್ಲಿ ಸ್ನೇಹಿತ ತನ್ನ ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ ಮಾಡಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಆರೋಪಿ ಡೈಲೂಟೇಡ್ ಸೆಲ್ಫುರಿಕ್ ಆಸಿಡ್ ಎರಚಿದ್ದಾನೆ. ಗಾಯಾಳು ಮುಖ, ಎದೆಗೆ ಗಾಯವಾಗಿದ್ದು, ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ ದೇಹ ಶೇಕಡಾ 30ರಷ್ಟು ಸುಟ್ಟು ಹೋಗಿದೆ. ಸದ್ಯ ಆರೋಪಿ ಜನತಾ ಅದಕ್​ನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಬಳಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪುರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣ: ಆದಿಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು

ಇದನ್ನೂ ಓದಿ
Image
ಏರ್ಟೆಲ್​​ನಿಂದ ಹೊಸ ಆಲ್-ಇನ್-ಒನ್ ಬ್ರಾಡ್‌ಬ್ಯಾಂಡ್‌ ಯೋಜನೆ
Image
Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್
Image
Hanuman Birth Place: ಕರ್ನಾಟಕದ ಅಂಜನಾದ್ರಿ ಬೆಟ್ಟವೇ ಹನುಮನ ಜನ್ಮಸ್ಥಳ ಗೋವಿಂದಾನಂದ ಸ್ವಾಮೀಜಿ ಹೇಳಿಕೆ
Image
Petrol Pump Owners Strike: ತೈಲ ಮಾರ್ಕೆಟಿಂಗ್ ಕಂಪೆನಿಯಿಂದ ಮೇ 31ಕ್ಕೆ ಪೆಟ್ರೋಲ್ -ಡೀಸೆಲ್ ಖರೀದಿಸಲ್ಲ; ಏಕೆ, ಏನು ಎಂಬ ಮಾಹಿತಿ ಇಲ್ಲಿದೆ

ಪ್ರೀತಿ ನಿರಾಕರಿಸಿದ್ದಕ್ಕೆ ಆ್ಯಸಿಡ್ ದಾಳಿ: ಈ ಹಿಂದೆ ನಗರದ ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ನಾಗೇಶ್ ಈ ಕೃತ್ಯ ಎಸಗಿದ್ದ. ಆ್ಯಸಿಡ್ ದಾಳಿ ನಡೆಸಿ ಸುಮಾರು 15 ದಿನಗಳ ಕಾಲ ನಾಪತ್ತೆಯಾಗಿದ್ದ. ಪೊಲೀಸರ ನಿರಂತರ ಕಾರ್ಯಚರಣೆಯಿಂದ ಆರೋಪಿಯನ್ನು ಬಂಧಿಸಿದ್ದರು.

ಇನ್ನೂ ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಪರಿಸ್ಥಿತಿ ಒಂದೊಂದು ದಿನ ಒಂದೊಂದು ರೀತಿಯಲ್ಲಿದೆ. ಹಾಸ್ಪಿಟಲ್ನಲ್ಲಿ ಸಾವು- ಬದುಕಿನ ನಡುವೆ ಹೋರಾಟ ಮಾಡ್ತಿದ್ದಾಳೆ. ಆ್ಯಸಿಡ್ ಯುವತಿಯ ಮೇಲೆ ಶೇಕಡಾ 1/3rd (36%) ರಷ್ಟು ಶರೀರದ ಮೇಲೆ ಡೀಪ್ ಅಟ್ಯಾಕ್ ಆಗಿರುವುದರಿಂದಾಗಿ ಯುವತಿಗೆ ಸರ್ಜರಿ ಮಾಡುವಾಗ ಇನ್ಫೆಕ್ಷನ್ ಕಂಡು ಬರುತ್ತಿದೆ. ಅದರಿಂದಾಗಿ ಯುವತಿಯ ಪೋಷಕರ ಆತಂಕಕ್ಕೆ ಕಾರಣವಾಗುತ್ತಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 31 May 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​