AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಪ್ರಿಯಕರನಿಂದ ಪ್ರಿಯತಮೆ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಜೀವನ್ ​ಭೀಮಾ ನಗರದ ಕೋಡಿಹಳ್ಳಿಯಲ್ಲಿ ನಡೆದಿದೆ.

Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ
ಜೀವನ್ ಭೀಮಾನಗರ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on: Jun 06, 2023 | 10:03 AM

Share

ಬೆಂಗಳೂರು: ಪ್ರಿಯಕರನಿಂದಲೇ (Beloved) ಪ್ರಿಯತಮೆ ಹತ್ಯೆಯಾಗಿರುವ ಘಟನೆ ಬೆಂಗಳೂರಿನ (Bengaluru) ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ನಡೆದಿದೆ. ಪ್ರಿಯಕರ ಅರ್ಪಿತ್ ಕೊಲೆ (Murder) ಆರೋಪಿ. ಆಕಾಂಕ್ಷಾ ಮೃತ ದುರ್ದೈವಿ. ನಿನ್ನೆ (ಜೂ.05) ರಂದು ಘಟನೆ ನಡೆದಿದೆ. ಜೀವನ್ ಭೀಮಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದ್​ ಮೂಲದ ಆಕಾಂಕ್ಷಾ ಮತ್ತು ದೆಹಲಿ ಮೂಲದ ಅರ್ಪಿತ್ ಈ ಹಿಂದೆ ಒಂದೇ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲೇ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿ, ಒಟ್ಟಿಗೆ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇತ್ತೀಚಿಗೆ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದರು.

ಆದರೆ ಇಬ್ಬರ ನಡುವೆ ಕಳೆದ ಕೆಲ ದಿನಗಳಿಂದ ಜಗಳವಾಗುತ್ತಿತ್ತು. ಈ ಹಿನ್ನಲೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ನಿನ್ನೆ ಕೂಡ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದ್ದು ಅರ್ಪಿತ್,​ ಆಕಾಂಕ್ಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್​ಗೆ ಕಟ್ಟಲು ಯತ್ನಿಸಿದ್ದಾನೆ. ಆದರೆ ಸಾಧ್ಯವಾಗದೆ ನೆಲದ ಮೇಲೆ ಬಿಟ್ಟು ಪರಾರಿಯಾಗಿದ್ದಾನೆ. ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ ಬಿಂಬಿಸಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಕೊಲೆ

ರಾತ್ರಿ ಮತ್ತೊರ್ವ ರೂಮೆಂಟ್ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ಅನುಮಾನಾಸ್ಪದ ಸಾವು ಎಂದು ಅಂದುಕೊಂಡಿದ್ದರು. ಆದರೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ತಿಳಿದುಬಂದಿದೆ. ಇನ್ನು ಆರೋಪಿ ಅರ್ಪಿತ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ