AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ
ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on:Jul 11, 2023 | 4:46 PM

Share

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ (Instagram Reels) ಮಾಡಿ ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ (Assault) ನಡೆಸಿದ ಘಟನೆ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈತ ರೀಲ್ಸ್ ಮಾಡುವಾಗ ಪ್ರಜ್ವಲ್ ಎಂಬಾತನ ತಾಯಿಗೆ ಅತ್ಯಂತ ಕೆಟ್ಟದಾಗಿ ಬೈದಿದ್ದನಂತೆ. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದ. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದರು.

ಇದನ್ನೂ ಓದಿ: Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

ಇಂತಹ ಘಟನೆ ಆಗುವ ಮುಂಚೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 11 July 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು