ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ
ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
Follow us
| Updated By: Rakesh Nayak Manchi

Updated on:Jul 11, 2023 | 4:46 PM

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ (Instagram Reels) ಮಾಡಿ ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ (Assault) ನಡೆಸಿದ ಘಟನೆ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈತ ರೀಲ್ಸ್ ಮಾಡುವಾಗ ಪ್ರಜ್ವಲ್ ಎಂಬಾತನ ತಾಯಿಗೆ ಅತ್ಯಂತ ಕೆಟ್ಟದಾಗಿ ಬೈದಿದ್ದನಂತೆ. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದ. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದರು.

ಇದನ್ನೂ ಓದಿ: Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

ಇಂತಹ ಘಟನೆ ಆಗುವ ಮುಂಚೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 11 July 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ