AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ
ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
ಶಿವಕುಮಾರ್ ಪತ್ತಾರ್
| Edited By: |

Updated on:Jul 11, 2023 | 4:46 PM

Share

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ (Instagram Reels) ಮಾಡಿ ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ (Assault) ನಡೆಸಿದ ಘಟನೆ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈತ ರೀಲ್ಸ್ ಮಾಡುವಾಗ ಪ್ರಜ್ವಲ್ ಎಂಬಾತನ ತಾಯಿಗೆ ಅತ್ಯಂತ ಕೆಟ್ಟದಾಗಿ ಬೈದಿದ್ದನಂತೆ. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದ. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದರು.

ಇದನ್ನೂ ಓದಿ: Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

ಇಂತಹ ಘಟನೆ ಆಗುವ ಮುಂಚೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 11 July 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!