ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ
ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
Edited By: Rakesh Nayak Manchi

Updated on: Jul 11, 2023 | 4:46 PM

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ (Instagram Reels) ಮಾಡಿ ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ (Assault) ನಡೆಸಿದ ಘಟನೆ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈತ ರೀಲ್ಸ್ ಮಾಡುವಾಗ ಪ್ರಜ್ವಲ್ ಎಂಬಾತನ ತಾಯಿಗೆ ಅತ್ಯಂತ ಕೆಟ್ಟದಾಗಿ ಬೈದಿದ್ದನಂತೆ. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದ. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದರು.

ಇದನ್ನೂ ಓದಿ: Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

ಇಂತಹ ಘಟನೆ ಆಗುವ ಮುಂಚೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 11 July 23

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us