AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿ ಆರೋಗ್ಯ ಸ್ಥಿರ; ಆರೋಪಿ ಹುಡುಕಾಟಕ್ಕೆ 7 ತಂಡ ರಚನೆ

ಮೊದಲು ಮೂರು ತಂಡದಿಂದ ಹುಡುಕಾಟ ನಡೆಸಲಾಗುತ್ತಿತ್ತು. ನಂತರ ಐದು ತಂಡಗಳಾಗಿ ಮಾಡಿಕೊಳ್ಳಲಾಗಿತ್ತು. ಸದ್ಯಕ್ಕೆ 7 ತಂಡದಿಂದ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿನ್ನೆ ಸಂಜೆಯೊಳಗೆ ಬಂಧಿಸುವುದಾಗಿ ಹೇಳಿದ್ದರು.

ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿ ಆರೋಗ್ಯ ಸ್ಥಿರ; ಆರೋಪಿ ಹುಡುಕಾಟಕ್ಕೆ 7 ತಂಡ ರಚನೆ
ಸಂತ್ರಸ್ತ ಯುವತಿ
TV9 Web
| Updated By: sandhya thejappa|

Updated on:May 01, 2022 | 12:42 PM

Share

ಬೆಂಗಳೂರು: ಸುಂಕದಕಟ್ಟೆಯಲ್ಲಿ ಏಪ್ರಿಲ್ 28ರಂದು ಆ್ಯಸಿಡ್​ (Acid) ದಾಳಿಗೆ ಒಳಗಾಗಿದ್ದ ಯುವತಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೇಂಟ್ ಜಾನ್ಸ್ ಆಸ್ಪತ್ರೆಯ ಐಸಿಯುನಲ್ಲಿ (ICU) ಸಂತ್ರಸ್ತೆಗೆ ಚಿಕಿತ್ಸೆ ಮುಂದುವರೆದಿದೆ. ದಿನದಿಂದ ದಿನಕ್ಕೆ ಯುವತಿ ಚೇತರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿಕಿತ್ಸಾ ವೆಚ್ಚ ಭರಿಸೋದಾಗಿ ಸರ್ಕಾರ ಹೇಳಿದೆ. ಇನ್ನು ಆರೋಪಿ ನಾಗೇಶ್​ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. 72 ಗಂಟೆ ಕಳೆದರೂ ಆರೋಪಿ ಪತ್ತೆಯಾಗಿಲ್ಲ. ಸಿಕ್ಕ ಸುಳಿವುಗಳ ಮೇಲೆ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಮೊದಲು ಮೂರು ತಂಡದಿಂದ ಹುಡುಕಾಟ ನಡೆಸಲಾಗುತ್ತಿತ್ತು. ನಂತರ ಐದು ತಂಡಗಳಾಗಿ ಮಾಡಿಕೊಳ್ಳಲಾಗಿತ್ತು. ಸದ್ಯಕ್ಕೆ 7 ತಂಡದಿಂದ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿನ್ನೆ ಸಂಜೆಯೊಳಗೆ ಬಂಧಿಸುವುದಾಗಿ ಹೇಳಿದ್ದರು. ಆದ್ರೆ ರಾತ್ರಿ ಕಳೆದು ಬೆಳಗಾದರೂ ಆರೋಪಿ ಸುಳಿವಿಲ್ಲ. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿಯೂ ಹುಡುಕಾಟ ನಡೆಯುತ್ತಿದೆ. ಈಗಾಗಲೇ ಪೊಲೀಸರು ಆರೋಪಿಯ ಸ್ನೇಹಿತರು, ಕುಟುಂಬಸ್ಥರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 20ಕ್ಕೂ ಹೆಚ್ಚು ಜನರನ್ನ ವಶಪಡೆದಿದ್ದಾರೆ.

ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ: ಆ್ಯಸಿಡ್ ದಾಳಿ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ಮಾಡಿದ್ದಾರೆ. ಹೆಗ್ಗನಹಳ್ಳಿ ಬಳಿಯ ನಿಸರ್ಗ ಶಾಲೆಯಿಂದ ಪ್ರತಿಭಟನಾ ಮೆರವಣಿಗೆ ಮಾಡಿದ್ದಾರೆ. ನಿಸರ್ಗ ಶಾಲಾ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸಂತ್ರಸ್ತೆ ಯುವತಿ 2013ರಲ್ಲಿ ಇದೇ ಶಾಲೆಯಲ್ಲಿ 10ನೇ ತರಗತಿ ಓದಿದ್ದರು.  ಕೂಡಲೇ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾಳೆಯಿಂದ ಸಂತ್ರಸ್ತೆ ಯುವತಿಗೆ ಚರ್ಮ ಜೋಡಣೆ ಚಿಕಿತ್ಸೆ: ನಾಳೆಯಿಂದ ಸಂತ್ರಸ್ತೆ ಯುವತಿಗೆ ಚರ್ಮ ಜೋಡಣೆ ಚಿಕಿತ್ಸೆ ಪ್ರಾರಂಭವಾಗುತ್ತದೆ. ವಿಕ್ಟೋರಿಯಾದಿಂದ ಸ್ಕಿನ್ ಸೇಂಟ್ ಜಾನ್ಸ್ ಆಸ್ಪತ್ರೆ ತಲುಪಿದೆ. ಚರ್ಮ ಜೋಡಣೆಯ ಬಳಿಕ 2-3 ವಾರಗಳಲ್ಲಿ ಬೆಳವಣಿಗೆ ಆಗುತ್ತದೆ. ಮೊದಲಿದ್ದ ರೀತಿಯಲ್ಲೇ ಚರ್ಮ ಬೆಳವಣಿಗೆ ಆಗುತ್ತದೆ. ಚರ್ಮ ಜೋಡಣೆಯ ಬಳಿಕ ನೋವು ಕಡಿಮೆಯಾಗಲಿದೆ. ನೋವು ಕಡಿಮೆಯಾಗಿ ಸುಟ್ಟ ಗಾಯದ ಉರಿ ಕಡಿಮೆಯಾಗುತ್ತೆ. ಸ್ವಂತ ಚರ್ಮದ ಬೆಳವಣಿಗೆಯಾಗಿ ದೇಹ ಮೊದಲಿನ ಸ್ಥಿತಿಗೆ ಬರಲಿದೆ. ಡೋನರ್​ಗಳಿಂದ ಪಡೆದ ಸ್ಕಿನ್ ಲ್ಯಾಬ್​ನಲ್ಲಿ ಟೆಸ್ಟ್ ಮಾಡಲಾಗುತ್ತೆ. ತೊಂದರೆ ಇಲ್ಲವೆಂದ ಖಚಿತವಾದ ಬಳಿಕವೇ ಸ್ಕಿನ್ ಸ್ಟೋರ್ ಮಾಡುತ್ತಾರೆ.

ಇದನ್ನೂ ಓದಿ

Thala Ajith Kumar Birthday: ಅಜಿತ್​ ಕುಮಾರ್​ ಜನ್ಮದಿನ: ವಿಮಾನದ ಪೈಲಟ್​ ಕೂಡ ಆಗಿರುವ ಸ್ಟಾರ್​ ನಟನಿಗಿದೆ ಹಲವು ಹವ್ಯಾಸ

World Laughter Day 2022: ಇಂದು ವಿಶ್ವ ನಗು ದಿನ; ಏನಿದರ ವಿಶೇಷ? ಮೊದಲಿಗೆ ಆಚರಿಸಿದ್ದು ಎಲ್ಲಿ? ಕುತೂಹಲಕರ ಮಾಹಿತಿ ಇಲ್ಲಿದೆ

Published On - 8:48 am, Sun, 1 May 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ