ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ

ವ್ಯಕ್ತಿಯೊಬ್ಬರು ತನ್ನ ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ನಗರದಲ್ಲಿ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ
ತನ್ನ ಪ್ರಿಯತಮೆಯ ತಂದೆಯಿಂದ ಚಾಕು ಇರಿತಕ್ಕೆ ಒಳಗಾದ ಯುವಕ
Follow us
| Updated By: Rakesh Nayak Manchi

Updated on: Jul 16, 2023 | 9:57 PM

ಧಾರವಾಡ, ಜುಲೈ 16: ತನ್ನ ಮಗಳನ್ನು ಪ್ರೀತಿಸಿದ ಯುವಕನಿಗೆ ತಂದೆ ಚಾಕುವಿನಿಂದ ಇರಿದ (Knife stabbing) ಘಟನೆ ಧಾರವಾಡದ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈದಾಪುರ ಬಡಾವಣೆಯಲ್ಲಿ ನಡೆದಿದೆ. ಶಶಾಂಕ್ ಮೂಗನ್ನವರ ಚಾಕು ಇರಿತಕ್ಕೆ ಒಳಗಾದ ಯುವಕ. ಸದ್ಯ ಶಶಾಂಕ್​ನನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಹುಲಗಪ್ಪ ಬಡಿಗೇರ ಎಂಬವರ ಮಗಳನ್ನು ಶಶಾಂಕ್ ಮೂಗನ್ನವರ ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದು ಕೋಪಗೊಂಡ ಹುಲಗಪ್ಪ ಬಡಿಗೇರ, ಶಶಾಂಕನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಶಶಾಂಕ್​ಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಇದೇ ರೀತಿ, ಪ್ರೀತಿ ವಿಚಾರಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮನಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಸಲಿಗೆ, ಈ ಪ್ರಕರಣದಲ್ಲಿ ಗಾಯಗೊಂಡಿರುವ ಯುವಕ ಪ್ರೀತಿಸುತ್ತಿದ್ದದ್ದ ತನ್ನದೇ ಸಂಬಂಧಿಕರ ಯುವತಿಯನ್ನು. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.

ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ತಂದೆ ರಂಗನಾಥ ನಿನ್ನೆ ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಮನುವನ್ನು ಕಿಡ್ನಾಪ್ ಮಾಡಿ ಯುವಕನ ಕೈ ಕಾಲು ಕಟ್ಟಿಹಾಕಿ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ