AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ

ವ್ಯಕ್ತಿಯೊಬ್ಬರು ತನ್ನ ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ನಗರದಲ್ಲಿ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ
ತನ್ನ ಪ್ರಿಯತಮೆಯ ತಂದೆಯಿಂದ ಚಾಕು ಇರಿತಕ್ಕೆ ಒಳಗಾದ ಯುವಕ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on: Jul 16, 2023 | 9:57 PM

Share

ಧಾರವಾಡ, ಜುಲೈ 16: ತನ್ನ ಮಗಳನ್ನು ಪ್ರೀತಿಸಿದ ಯುವಕನಿಗೆ ತಂದೆ ಚಾಕುವಿನಿಂದ ಇರಿದ (Knife stabbing) ಘಟನೆ ಧಾರವಾಡದ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈದಾಪುರ ಬಡಾವಣೆಯಲ್ಲಿ ನಡೆದಿದೆ. ಶಶಾಂಕ್ ಮೂಗನ್ನವರ ಚಾಕು ಇರಿತಕ್ಕೆ ಒಳಗಾದ ಯುವಕ. ಸದ್ಯ ಶಶಾಂಕ್​ನನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಹುಲಗಪ್ಪ ಬಡಿಗೇರ ಎಂಬವರ ಮಗಳನ್ನು ಶಶಾಂಕ್ ಮೂಗನ್ನವರ ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದು ಕೋಪಗೊಂಡ ಹುಲಗಪ್ಪ ಬಡಿಗೇರ, ಶಶಾಂಕನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಶಶಾಂಕ್​ಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಇದೇ ರೀತಿ, ಪ್ರೀತಿ ವಿಚಾರಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮನಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಸಲಿಗೆ, ಈ ಪ್ರಕರಣದಲ್ಲಿ ಗಾಯಗೊಂಡಿರುವ ಯುವಕ ಪ್ರೀತಿಸುತ್ತಿದ್ದದ್ದ ತನ್ನದೇ ಸಂಬಂಧಿಕರ ಯುವತಿಯನ್ನು. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.

ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ತಂದೆ ರಂಗನಾಥ ನಿನ್ನೆ ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಮನುವನ್ನು ಕಿಡ್ನಾಪ್ ಮಾಡಿ ಯುವಕನ ಕೈ ಕಾಲು ಕಟ್ಟಿಹಾಕಿ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ