ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಡಗು: ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೊಸ್ಕೇರಿ ಗ್ರಾಮದ ಕೆ.ಬಿ.ಸುಖೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊಡವ ಜನಾಂಗದ ವಿರುದ್ಧ ಹೇಳಿಕೆಗಳನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಕೊಟ್ಟಿದ್ದರು. ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ‌ ನೀಡಲಾಗಿತ್ತು. ಆದರೆ ಎರಡನೇ ಬಾರಿಯೂ ನಿಂದನೆ ಹೇಳಿಕೆಯನ್ನು ಮತ್ತೆ ಹಾಕಿದ್ದ. ಹೀಗಾಗಿ ಐಪಿಸಿ ಕಾಯ್ದೆ 153 A ರಂತೆ ಪ್ರಕರಣ ದಾಖಲಿಸಿಕೊಂಡು ಸುಖೇಶ್ ಎಂಬುವನ್ನು […]

ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
ಸಾಧು ಶ್ರೀನಾಥ್​

Updated on: May 09, 2020 | 10:48 AM

ಕೊಡಗು: ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೊಸ್ಕೇರಿ ಗ್ರಾಮದ ಕೆ.ಬಿ.ಸುಖೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಡವ ಜನಾಂಗದ ವಿರುದ್ಧ ಹೇಳಿಕೆಗಳನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಕೊಟ್ಟಿದ್ದರು. ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ‌ ನೀಡಲಾಗಿತ್ತು.

ಆದರೆ ಎರಡನೇ ಬಾರಿಯೂ ನಿಂದನೆ ಹೇಳಿಕೆಯನ್ನು ಮತ್ತೆ ಹಾಕಿದ್ದ. ಹೀಗಾಗಿ ಐಪಿಸಿ ಕಾಯ್ದೆ 153 A ರಂತೆ ಪ್ರಕರಣ ದಾಖಲಿಸಿಕೊಂಡು ಸುಖೇಶ್ ಎಂಬುವನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us